ಕುಂದಾಪುರ

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

Share

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ ಭಾಗದ ಕಾರ್ಯಕರ್ತರು ಮನೆ ಮೇಲೆ ಮರ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ ಕೂಡಲೇ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.ಮನೆ ಮರ ಬಿದ್ದ ಪರಿಣಾಮ ಮನೆಯು ಸಂಪೂರ್ಣ ಹಾನಿಯಾಗಿದ್ದು ಮಾತ್ರವಲ್ಲದೇ ಮನೆಯ ಮೂವರಿಗೆ ಗಂಭೀರ ಸ್ವರೂಪದ ಗಾಯವೂ ಆಗಿದೆ. ಗಾಯಗೊಂಡಿರುವ ಮನೆಯ ಸದಸ್ಯರೊಂದಿಗೂ ಕೆಲಕಾಲ ಶಾಸಕರು ಮಾತನಾಡಿ ಅವರನ್ನು ಸಂತೈಸಿದರು.
ಮಳೆ ಮತ್ತು ಗಾಳಿ ಜೋರಾಗಿ ಬಂದಿದ್ದರಿಂದ ಮರ ಕುಸಿದು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಗರಿಷ್ಠ ಎಷ್ಟು ಪರಿಹಾರ ಒದಗಿಸಲು ಸಾಧ್ಯವೋ ಆ ಪ್ರಯತ್ನ ಮಾಡಲಾಗುವುದು. ಪಂಚಾಯತಿ,ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೂ ಮಾಹಿತಿ ಹೋಗಲಿದೆ.ನೊಂದ ಕುಟುಂಬಕ್ಕೆ ಅಗತ್ಯ ಪರಿಹಾರ ಸಿಗಲಿದೆ ಎಂದರು.
ಮೂರು ದಿನಗಳ ಹಿಂದೆ ಸುರಿದ ಧಾರಕಾರ ಮಳೆಗೆ ಬೃಹತ್ ಮರವೊಂದು ಮನೆಯ ಮಲೆ ಬಿದ್ದು ಮನೆಯ ಒಂದು ಭಾಗವನ್ನು ಸಂಪೂರ್ಣ ಹಾನಿ ಮಾಡಿದೆ. ಮೇಲ್ಛಾವಣಿ ಕುಸಿದಿದ್ದು ಮಾತ್ರವಲ್ಲದೇ ಗೋಡೆಗಳು ಬಿರುಕುಬಿಟ್ಟಿವೆ. ಇಡೀ ಮನೆಯ ಪುನರ್ ನಿರ್ಮಾಣ ಆಗಬೇಕಿದೆ. ಹಾಗೆಯೇ ಮರ ಮನೆ ಮೇಲೆ ಬೀಳುವ ಸಂದರ್ಭದಲ್ಲಿ ಮನೆಯೊಳಗಿದ್ದ ಮೂವರಿಗೂ ಗಂಭೀರ ಗಾಯಗಳಾಗಿವೆ. ಈ ವಿಷಯ ತಿಳಿದ ಕೂಡಲೇ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ನೋಂದ ಕುಟುಂಬದವರೊಂದಿಗೆ ಮಾತನಾಡುವ ಮಾನವೀಯ ಕಾರ್ಯ ನಡೆಸಿದ್ದಾರೆ.
ಈ ವೇಳೆ ಬಿಜೆಪಿ ಪ್ರಮುಖರಾದ ಸುರೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ ಗೆದ್ದೆ ಜಿಲ್ಲಾ ಪಂಚಾಯತ್ ಸದಸ್ಯರಾದ ರೋಹಿತ್ ಶೆಟ್ಟಿ,ಶ್ರೀಗಣೇಶ ಗಾಣಿಗ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago