ಕುಂದಾಪುರ

ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ,ಸಾಧಕ ಕಲಾವಿದರಿಗೆ ಸನ್ಮಾನ

Share

Advertisement
Advertisement
oplus_2

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ ಕೂಡ್ಲಿಹಿತ್ಲು ಎಂಬಲ್ಲಿ ಯಕ್ಷಪ್ರೇಮಿ ರಶ್ಮಿತಾ ಸಂಜಯ್ ಮೊವಾಡಿ ಅವರ ಪ್ರಾಯೋಜಕತ್ವದಲ್ಲಿ ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಗುರುವಾರ ನಡೆಯಿತು.
ಸಿಗಂದೂರು ಮೇಳದವರಿಂದ ಮತದಾನ ಜಾಗೃತಿ ಕುರಿತು ವಿಶೇಷ ನಾಟ್ಯ ಪ್ರದರ್ಶನವನ್ನು ಮಾಡಲಾಯಿತು.ಬಡಗುತಿಟ್ಟಿನ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಲಾಯಿತು.
ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮದ ಆಯೋಜಕರಾದ ರಶ್ಮಿತಾ ಸಂಜಯ್ ಮೊವಾಡಿ ಅವರು ಸಾಧಕ ಯಕ್ಷಗಾನ ಕಲಾವಿದರನ್ನು ಸನ್ಮಾನಿಸಿ ಮಾತನಾಡಿ,ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ ಎನ್ನುವುದು ಬಹಳ ದಿನಗಳ ಕಾಲದ ಕನಸಾಗಿದೆ.ಯುವ ಪೀಳಿಗೆಗೆ ಉತ್ತಮವಾದ ಸಂದೇಶವನ್ನು ನೀಡಬೇಕು ಎನ್ನುವ ದೃಷ್ಟಿಯಲ್ಲಿ ಇವೊಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು.ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.
ರಾಘವೇಂದ್ರ ಮೆಂಡನ್ ಕೋಣ್ಕಿ ಮಾತನಾಡಿ,ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮ ಗ್ರಾಮೀಣ ಪ್ರದೇಶದಲ್ಲಿ ಅದ್ದೂರಿಯಾಗಿ ನಡೆದಿದೆ.ಕಲಾವಿದರನ್ನು ಸನ್ಮಾನಿಸಿ,ಅಶಕ್ತ ಕುಟುಂಬಕ್ಕೆ ನೆರವನ್ನು ನೀಡುವುದರ ಮೂಲಕ ಮಾದರಿ ಕಾರ್ಯಕ್ರಮವನ್ನು ಆಯೋಜಿಸಿರುವ ರಶ್ಮಿತಾ ಸಂಜಯ್ ಮೊವಾಡಿ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದರು.ಇಂತಹ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಆಗಬೇಕು ಎಂದು ಹೇಳಿದರು.
ಆರ್.ಜೆ ಇಂದ್ರ ಮಾತನಾಡಿ,ಯಕ್ಷೋತ್ಸ ಕಾರ್ಯಕ್ರಮ ಬಹಳಷ್ಟು ಅದ್ದೂರಿಯಾಗಿ ಆಯೋಜನೆ ಮಾಡಲಾಗಿದ್ದು ಊರಿನಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಉಂಟಾಗಿದೆ.ಇದೊಂದು ಮಾದರಿ ಯಕ್ಷಗಾನ ಕಾರ್ಯಕ್ರಮವಾಗಿದ್ದು ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆಯಬೇಕು ಎಂದರು.
ಉದಯಕುಮಾರ್ ಹಟ್ಟಿಯಂಗಡಿ,ಪ್ರವೀಣ ಕುಮಾರ್ ಶೆಟ್ಟಿ ಕಡಿಕೆ,ರಾಘವೇಂದ್ರ ಮೆಂಡನ್,ಭಾಸ್ಕರ ಸಿ ಕುಂದರ್,ನಾಗರಾಜ,ಸಂದೀಪ್ ಬಸ್ರೂರು,ವಿಜಯ ಜಿ ಮೆಂಡನ್,ರಶ್ಮಿತಾ ಸಂಜಯ್ ಕೂಡ್ಗಿಹಿತ್ಲು ಉಪಸ್ಥಿತರಿದ್ದರು.
ಸಾಲಿಗ್ರಾಮ ಮೇಳದ ಶ್ರೇಷ್ಠ ಕಲಾವಿದರಾದ ಶಶಿಕಾಂತ್ ಶೆಟ್ಟಿ ಕಾರ್ಕಳ,ಮಾರಣಕಟ್ಟೆ ಮೇಳದ ನಂದೀಶ್ ಮೊಗವೀರ ಜನ್ನಾಡಿ ಮತ್ತು ಭಾಗವತರಾದ ಗಜೇಂದ್ರ ಆಜ್ರಿ,ಸಿಗಂದೂರು ಮೇಳದ ಆನಂದ ಅಂಕೋಲಾ ಮತ್ತು ನರಸಿಂಹ ಚಿಟ್ಟಾಣಿ,ಮೇಳದ ಸಿಬ್ಬಂದಿ ಗಜಾನನ ಮರಾಠಿ ಹಾಗೂ ಬೆಂಗಳೂರು ಉದ್ಯಮಿ ವರುಣ್ ಅವರನ್ನು ಕೂಡ್ಗಿಹಿತ್ಲು ಯಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ರಂಗಸ್ಥಳದಲ್ಲಿ ಸನ್ಮಾನಿಸಲಾಯಿತು.
ವಿಶೇಷ ಚೇತನ ಶ್ರೀರಕ್ಷಾ ಅವರಿಗೆ ಧನಸಹಾಯವನ್ನು ವಿತರಿಸಲಾಯಿತು.

ಆರ್.ಜೆ ಇಂದ್ರ ಸ್ವಾಗತಿಸಿ,ವಂದಿಸಿದರು.ಸಿಗಂದೂರು ಮೇಳದವರಿಂದ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಿತು.ಯಕ್ಷೋತ್ಸವ ಕಾರ್ಯಕ್ರಮದಲ್ಲಿ ರಶ್ಮಿತಾ ಸಂಜಯ್ ಮೊವಾಡಿ ದಂಪತಿಗಳನ್ನು ಸಿಗಂದೂರು ಮೇಳದ ವತಿಯಿಂದ ಗೌರವಿಸಲಾಯಿತು.
ವರದಿ:-ರಾಕೇಶ್
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ-9916284048

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago