ಕುಂದಾಪುರ

ಏಪ್ರಿಲ್.27 ರಂದು ಕಿರಿಮಂಜೇಶ್ವರದಲ್ಲಿ ಯುವ ಸಮಾವೇಶ,ತೇಜಸ್ವಿ ಸೂರ್ಯ ಭಾಗಿ

Share

ಕುಂದಾಪುರ:ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶ ಏಪ್ರಿಲ್ 27 ರಂದು ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರದಲ್ಲಿ ನಡೆಯಲಿದೆ.
ಬಿಜೆಪಿ ಪಕ್ಷದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಯುವ ಸಮಾವೇಶವನ್ನು ಉದ್ಘಾಟಿಸಿ,ದಿಕ್ಸೂಚಿ ಭಾಷಣ ಮಾಡಲಿದ್ದು,ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ,ಯುವ ಜನತೆಯ ಉತ್ಸಾಹ,ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಲಿದ್ದಾರೆ.
ಯುವ ಮೋರ್ಚಾ ಸಮಾರೋಪ ಮುಗಿದ ನಂತರ ಅದೇ ವೇದಿಕೆಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ರೂಪಿಸಿ, ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮವಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ.ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡೆಗೆ ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.ಜಿಲ್ಲಾ ಹಾಗೂ ಮಂಡಲ ಬಿಜೆಪಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.ಯುವ ಮೋರ್ಚಾ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕವಾಗಿ ಭಾಗವಹಿಸಬೇಕೆಂದು ಬಿಜೆಪಿ ಬೈಂದೂರು ಮಂಡಲ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago