ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ಕೊಡಿಸುವಲ್ಲಿ ಪೇಜ್ ಪ್ರಮುಖರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಉಡುಪಿ ಮಾಜಿ ಶಾಸಕರಾದ ಕೆ.ರಘುಪತಿ ಭಟ್ ಹೇಳಿದರು.
ಶಿರೂರು ಮಾತ್ರಶ್ರೀ ಸಭಾಭವನದಲ್ಲಿ ಶನಿವಾರ ನಡೆದ ಉಪ್ಪುಂದ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖ್ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಕೈಗೊಂಡಿರುವ ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಈಗಾಗಲೇ ಎಲ್ಲ ಬೂತ್ ಗಳನ್ನು ಸುತ್ತಿ, ಅಲ್ಲಿನ ಕಾರ್ಯಕರ್ತರು, ಪ್ರಮುಖರು ಹಾಗೂ ಮತದಾರರೊಂದಿಗೆ ಸಭೆ ನಡೆಸಿದ್ದಾರೆ.ಸಂಘಟನಾತ್ಮಕವಾಗಿ ಇದೊಂದು ಮಾದರಿ ಕಾರ್ಯ ಎಂದು ಬಣ್ಣಿಸಿದರು.ಬೂತ್ ಗೆದ್ದರೆ ಕ್ಷೇತ್ರ ಗೆಲ್ಲಬಹುದು. ಬೂತ್ ಕಾರ್ಯ ಅತಿ ಮುಖ್ಯವಾಗಿದ್ದು,ಅದರಲ್ಲಿ ಪೇಜ್ ಪ್ರಮುಖರ ಕಾರ್ಯನಿರ್ವಹಣೆ ನಿರ್ಣಾಯಕವಾಗಿರುತ್ತದೆ. ಬಿಜೆಪಿ ಪರ ಮತದಾರರು ಶೇ.100ರಷ್ಟು ಮತದಾನ ಮಾಡುವಂತೆ ನೋಡಬೇಕು. ಮತ ಪ್ರಮಾಣ ಜಾಸ್ತಿ ಮಾಡುವ ಜತೆಗೆ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡುವಂತೆ ಮಾಡಬೇಕು ಎಂದು ಕರೆ ನೀಡಿದರು.
ಬಿಜೆಪಿ ಮುಖಂಡರಾದ ಯತೀಶ್ ಅವರು ಮಾತನಾಡಿ,ಪೇಜ್ ಪ್ರಮುಖರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಮಾರ್ಗದರ್ಶನ ಮಾಡಿದರು.
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ,ಬೈಂದೂರು ಮಂಡಲ ಮೀನುಗಾರಿಕ ಪ್ರಕೋಷ್ಠ ಸಂಚಾಲಕರಾದ ಕುಮಾರ್ ಬಿ.ಎಚ್.ಕೆ.,ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಗನ್ನಾಾಥ ಮೊಗವೀರ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸಿತರಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…