ಕುಂದಾಪುರ

ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್-ಬಿ.ವೈ ರಾಘವೇಂದ್ರಪರ ಪ್ರಚಾರ ಶ್ರೀಧರ ಬಿಜೂರು

Share

ಬೈಂದೂರು:ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ,ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ನಮಗೆ ಅರಿವಿಗೆ ಬಂದಿದೆ.ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ.ಈಶ್ವರಪ್ಪ ಅವರಿಗೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.
ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಷದಿಂದ ದೂರಾಗಿದ್ದು ನಿಜ.ಅದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದರು.ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಂದಿದ್ದರಿಂದ ಅವರೊಂದಿಗೆ ಸೇರಿಕೊಂಡಿದ್ದೇವು.ಈಗ ನಿಜಾಂಶ ಅರಿವಾಗಿದೆ. ಕಾಂಗ್ರೆಸ್ ಗೆಲ್ಲಿಸಲು ಅವರು ಶ್ರಮಿಸುತ್ತಿದ್ದಾರೆ ಮತ್ತು ಬಿಜೆಪಿ ಮತವನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.ಹೀಗಾಗಿ ಅವರಿಗೆ ನಮ್ಮ ಬೆಂಬಲ ಇಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸಣ್ಣಪುಟ್ಟ ವ್ಯತ್ಯಾಸಗಳು ಆಗಿರಬಹುದು.ಅದೆಲ್ಲವನ್ನು ಸರಿಪಡಿಸುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ. ಅಲ್ಲದೆ, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನೇಹಾಳ ಹತ್ಯೆಯ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ರೀತಿ ನಮ್ಮನ್ನು ಇನ್ನಷ್ಟು ಚಿಂತಿಗೆ ಈಡುಮಾಡಿದೆ.ಜಿಹಾದಿ ಮಾನಸಿಕತೆಗಳು ಹೆಚ್ಚುತ್ತಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡುವುದಿಲ್ಲ.ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ. ಸಂಸದರಾದ ಬಿ.ವೈ.ರಾಘವೇಂದ್ರ ಅವರ ಕೈ ಬಲಪಡಿಸುವ ಕಾರ್ಯ ಮಾಡಲಿದ್ದೇವೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ,ಈಶ್ವರಪ್ಪನವರು ನಮ್ಮ ಪಕ್ಷದ ಕೆಲವು ಕಾರ್ಯಕರ್ತರನ್ನು ಸೆಳೆದಿರುವುದು ನಿಜ. ಈಶ್ವರಪ್ಪರಿಂದ ಮೋಸ ಹೋಗಿರುವ ಬಗ್ಗೆ ಅವರಿಗೆ ಬಂದಿರುವುದರಿಂದ,ಪುನರ್ ಬಿಜೆಪಿಗೆ ಬಂದಿದ್ದಾರೆ.ಹೀಗಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ, ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆ.ಸ್ಥಳೀಯವಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದರು.
ಶಾಸಕರಾದ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಖಜಾಂಚಿ ಶ್ರೀಗಣೇಶ್ ಗಾಣಿಗ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

4 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

5 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

5 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago