ಕುಂದಾಪುರ

ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್-ಬಿ.ವೈ ರಾಘವೇಂದ್ರಪರ ಪ್ರಚಾರ ಶ್ರೀಧರ ಬಿಜೂರು

Share

ಬೈಂದೂರು:ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ,ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ನಮಗೆ ಅರಿವಿಗೆ ಬಂದಿದೆ.ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ.ಈಶ್ವರಪ್ಪ ಅವರಿಗೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.
ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಷದಿಂದ ದೂರಾಗಿದ್ದು ನಿಜ.ಅದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದರು.ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಂದಿದ್ದರಿಂದ ಅವರೊಂದಿಗೆ ಸೇರಿಕೊಂಡಿದ್ದೇವು.ಈಗ ನಿಜಾಂಶ ಅರಿವಾಗಿದೆ. ಕಾಂಗ್ರೆಸ್ ಗೆಲ್ಲಿಸಲು ಅವರು ಶ್ರಮಿಸುತ್ತಿದ್ದಾರೆ ಮತ್ತು ಬಿಜೆಪಿ ಮತವನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.ಹೀಗಾಗಿ ಅವರಿಗೆ ನಮ್ಮ ಬೆಂಬಲ ಇಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸಣ್ಣಪುಟ್ಟ ವ್ಯತ್ಯಾಸಗಳು ಆಗಿರಬಹುದು.ಅದೆಲ್ಲವನ್ನು ಸರಿಪಡಿಸುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ. ಅಲ್ಲದೆ, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನೇಹಾಳ ಹತ್ಯೆಯ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ರೀತಿ ನಮ್ಮನ್ನು ಇನ್ನಷ್ಟು ಚಿಂತಿಗೆ ಈಡುಮಾಡಿದೆ.ಜಿಹಾದಿ ಮಾನಸಿಕತೆಗಳು ಹೆಚ್ಚುತ್ತಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡುವುದಿಲ್ಲ.ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ. ಸಂಸದರಾದ ಬಿ.ವೈ.ರಾಘವೇಂದ್ರ ಅವರ ಕೈ ಬಲಪಡಿಸುವ ಕಾರ್ಯ ಮಾಡಲಿದ್ದೇವೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ,ಈಶ್ವರಪ್ಪನವರು ನಮ್ಮ ಪಕ್ಷದ ಕೆಲವು ಕಾರ್ಯಕರ್ತರನ್ನು ಸೆಳೆದಿರುವುದು ನಿಜ. ಈಶ್ವರಪ್ಪರಿಂದ ಮೋಸ ಹೋಗಿರುವ ಬಗ್ಗೆ ಅವರಿಗೆ ಬಂದಿರುವುದರಿಂದ,ಪುನರ್ ಬಿಜೆಪಿಗೆ ಬಂದಿದ್ದಾರೆ.ಹೀಗಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ, ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆ.ಸ್ಥಳೀಯವಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದರು.
ಶಾಸಕರಾದ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಖಜಾಂಚಿ ಶ್ರೀಗಣೇಶ್ ಗಾಣಿಗ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago