ಕುಂದಾಪುರ

ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಉತ್ಸವ

Share

ಕುಂದಾಪುರ:ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಕಾಲೇಜಿನಲ್ಲಿ ನಡೆದ ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಧಿರಿಸನ್ನು ತೊಟ್ಟು ಸಂಭ್ರಮಿಸಿದರು.ಪುರಾತನ ವಸ್ತುಗಳನ್ನು ವಸ್ತು ಪ್ರದರ್ಶನ ಮಾಡಲಾಯಿತು.ಆಕರ್ಷಕ ಶೈಲಿಯ ವಸ್ತುಗಳು ನೋಡುಗರ ಮನ ಸೆಳೆಯಿತು.ವಿದ್ಯಾರ್ಥಿಗಳಿಂದ ಭರತ ನಾಟ್ಯ,ಯಕ್ಷಗಾನ ಕಾರ್ಯಕ್ರಮ ಜರುಗಿತು.ಮಕರ ಸಂಕ್ರಾತಿ ಮಹತ್ವ,ತುಳಸಿ ಕಟ್ಟೆ ವಿಶೇಷತೆ ಹಾಗೂ ಗ್ರಾಮೀಣ ಪ್ರದೇಶದ ಜನರ ಜೀವನ ಪದ್ದತಿ,ತಿಂಡಿ ತಿನಿಸುಗಳು ಬಗ್ಗೆ ವಿದ್ಯಾರ್ಥಿಗಳು ವಿವರಿಸಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಅವರು ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಭಾರತದ ಸಂಸ್ಕøತಿ ಪರಂಪರೆಯನ್ನು ವಿಶ್ವವೆ ಕೊಂಡಾಡುತ್ತಿದೆ.ನಮ್ಮ ದೇಶದ ಸಂಸ್ಕೃತಿ,ಬದುಕಿನ ಶೈಲಿ,ಆಚಾರ ಮತ್ತು ವಿಚಾರವನ್ನು ಇಂದಿನ ಯುವ ಪೀಳಿಗೆಯ ಜನರು ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾಗಿದೆ ಎಂದರು.ನಮ್ಮ ಸಂಸ್ಕೃತಿಯನ್ನು ಮೆಲುಕ ಹಾಕುವ ದೃಷ್ಟಿಯಿಂದ ನಮ್ಮ ವಿದ್ಯಾಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನಾವರಣೆಯನ್ನು ಆಚರಿಸಲಾಗಿದೆ.ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಹೆಮ್ಮಾಡಿ ಜನತಾ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಜಾಗತಿಕ ರಂಗದಲ್ಲಿ ವಿದ್ಯೆಗೆ ಬಹಳಷ್ಟು ಪ್ರಾಮುಖ್ಯತೆ ಇದೆ,ವಿದ್ಯೆ ಇಲ್ಲದೆ ಬದುಕು ನಡೆಸುವುದು ಕಷ್ಟ ಎನ್ನುವಷ್ಟರ ಮಟ್ಟಿಗೆ ಬಂದು ತಲುಪಿದೆ.ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರ ನಮ್ಮ ದೇಶವಾಗಿದೆ.ಭಾರತೀಯ ಸಂಪ್ರದಾಯ ಉಳಿವುವಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು.ಪಾಶ್ಚಿಮಾತ್ಯ ಸಂಸ್ಕøತಿಗೆ ಮಾರು ಹೋಗದೆ ನಮ್ಮ ಬದುಕು ನಮ್ಮ ಜೀವನ ಅಚ್ಚುಕಟ್ಟಾಗಿ ರೂಪಗೊಳ್ಳಲು ಭಾರತೀಯ ಸಂಸ್ಕøತಿಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ವೇದಿಕೆಯ ಸದುಪಯೋಗ ಮಡೆದುಕೊಂಡಾಗ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಬದುಕಬಹುದು ಎಂದರು ಹೇಳಿದರು.
ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಸುಜಾತ ಅವರು ಮಾತನಾಡಿ,ಸಂಸ್ಕೃತಿ ಎನ್ನುವುದು ಭಾರತೀಯ ಪರಂಪರೆಯ ಜೀವಾಳವಾಗಿದೆ.ಸಾಂಪ್ರದಾಯಿಕ ದಿನಾಚರಣೆ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ ಎಂದರು.
ಕಾಲೇಜಿನ ವಿದ್ಯಾರ್ಥಿ ಸೌರಭ ಶೆಟ್ಟಿ ಮಾತನಾಡಿ,ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆ ನನಗೆ ಒಳ್ಳೆ ಅವಕಾಶವನ್ನು ಒದಗಿಸಿಕೊಟ್ಟಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಾಲೇಜಿನ ವಿದ್ಯಾರ್ಥಿನಿ ಪ್ರಾಂಜಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡು ಮಾತನಾಡಿ,ಸಾಂಪ್ರದಾಯಿಕ ದಿನಾಚರಣೆ ನನಗೆ ಹೊಸ ಅನುಭವನ್ನು ತಂದು ಕೊಟ್ಟಿದೆ ಎಂದರು.
ವಿದ್ಯಾರ್ಥಿನಿ ಶೈನಿ ವಸ್ತು ಪ್ರದರ್ಶನ ಕುರಿತು ವಿವರಿಸಿ ಮಾತನಾಡಿ,ಹಳೆ ಸಾಂಪ್ರದಾಯಿಕ ಶೈಲಿಯ ವಸ್ತುಗಳ ಬಗ್ಗೆ ವಿವರಿಸಿದರು.
ಕಾಲೇಜಿನ ವಿದ್ಯಾರ್ಥಿನಿ ಸ್ನೇಹ ಹಳ್ಳಿ ಬದುಕಿನ ಜೀವನ ಪದ್ಧತಿ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡು ಮಾತನಾಡಿ,ಅವಿಭಕ್ತ ಕುಟುಂಬದ ಕುರಿತು ಮತ್ತು ಆಧುನಿಕ ಬದುಕಿನ ಚಿತ್ರಣದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನನಿರ್ದೇಶಕಿ ಮಮತಾ,ವೈಸ್ ಪ್ರಿಸ್ಸಿಪಾಲ್ ಸುಜಾತ,ಸಾಂಸ್ಕ್ರತಿಕ ವೇದಿಕೆ ಸಂಚಾಲಕಿ ರಝಿಕಾ,ಅನುಪಮ ಭಟ್ ಮತ್ತು ಶಿಕ್ಷಕವೃಂದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸನ್ನಿಧಿ ಸ್ವಾಗತಿಸಿದರು.ಸ್ವಾತಿ ನಿರೂಪಿಸಿದರು.ಪ್ರಿಯಾಂಕ ಶೆಟ್ಟಿ ವಂದಿಸಿದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago