ಕುಂದಾಪುರ

ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಉತ್ಸವ

Share

ಕುಂದಾಪುರ:ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಕಾಲೇಜಿನಲ್ಲಿ ನಡೆದ ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಧಿರಿಸನ್ನು ತೊಟ್ಟು ಸಂಭ್ರಮಿಸಿದರು.ಪುರಾತನ ವಸ್ತುಗಳನ್ನು ವಸ್ತು ಪ್ರದರ್ಶನ ಮಾಡಲಾಯಿತು.ಆಕರ್ಷಕ ಶೈಲಿಯ ವಸ್ತುಗಳು ನೋಡುಗರ ಮನ ಸೆಳೆಯಿತು.ವಿದ್ಯಾರ್ಥಿಗಳಿಂದ ಭರತ ನಾಟ್ಯ,ಯಕ್ಷಗಾನ ಕಾರ್ಯಕ್ರಮ ಜರುಗಿತು.ಮಕರ ಸಂಕ್ರಾತಿ ಮಹತ್ವ,ತುಳಸಿ ಕಟ್ಟೆ ವಿಶೇಷತೆ ಹಾಗೂ ಗ್ರಾಮೀಣ ಪ್ರದೇಶದ ಜನರ ಜೀವನ ಪದ್ದತಿ,ತಿಂಡಿ ತಿನಿಸುಗಳು ಬಗ್ಗೆ ವಿದ್ಯಾರ್ಥಿಗಳು ವಿವರಿಸಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಅವರು ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಭಾರತದ ಸಂಸ್ಕøತಿ ಪರಂಪರೆಯನ್ನು ವಿಶ್ವವೆ ಕೊಂಡಾಡುತ್ತಿದೆ.ನಮ್ಮ ದೇಶದ ಸಂಸ್ಕೃತಿ,ಬದುಕಿನ ಶೈಲಿ,ಆಚಾರ ಮತ್ತು ವಿಚಾರವನ್ನು ಇಂದಿನ ಯುವ ಪೀಳಿಗೆಯ ಜನರು ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾಗಿದೆ ಎಂದರು.ನಮ್ಮ ಸಂಸ್ಕೃತಿಯನ್ನು ಮೆಲುಕ ಹಾಕುವ ದೃಷ್ಟಿಯಿಂದ ನಮ್ಮ ವಿದ್ಯಾಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನಾವರಣೆಯನ್ನು ಆಚರಿಸಲಾಗಿದೆ.ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಹೆಮ್ಮಾಡಿ ಜನತಾ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಜಾಗತಿಕ ರಂಗದಲ್ಲಿ ವಿದ್ಯೆಗೆ ಬಹಳಷ್ಟು ಪ್ರಾಮುಖ್ಯತೆ ಇದೆ,ವಿದ್ಯೆ ಇಲ್ಲದೆ ಬದುಕು ನಡೆಸುವುದು ಕಷ್ಟ ಎನ್ನುವಷ್ಟರ ಮಟ್ಟಿಗೆ ಬಂದು ತಲುಪಿದೆ.ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರ ನಮ್ಮ ದೇಶವಾಗಿದೆ.ಭಾರತೀಯ ಸಂಪ್ರದಾಯ ಉಳಿವುವಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು.ಪಾಶ್ಚಿಮಾತ್ಯ ಸಂಸ್ಕøತಿಗೆ ಮಾರು ಹೋಗದೆ ನಮ್ಮ ಬದುಕು ನಮ್ಮ ಜೀವನ ಅಚ್ಚುಕಟ್ಟಾಗಿ ರೂಪಗೊಳ್ಳಲು ಭಾರತೀಯ ಸಂಸ್ಕøತಿಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ವೇದಿಕೆಯ ಸದುಪಯೋಗ ಮಡೆದುಕೊಂಡಾಗ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಬದುಕಬಹುದು ಎಂದರು ಹೇಳಿದರು.
ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಸುಜಾತ ಅವರು ಮಾತನಾಡಿ,ಸಂಸ್ಕೃತಿ ಎನ್ನುವುದು ಭಾರತೀಯ ಪರಂಪರೆಯ ಜೀವಾಳವಾಗಿದೆ.ಸಾಂಪ್ರದಾಯಿಕ ದಿನಾಚರಣೆ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ ಎಂದರು.
ಕಾಲೇಜಿನ ವಿದ್ಯಾರ್ಥಿ ಸೌರಭ ಶೆಟ್ಟಿ ಮಾತನಾಡಿ,ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆ ನನಗೆ ಒಳ್ಳೆ ಅವಕಾಶವನ್ನು ಒದಗಿಸಿಕೊಟ್ಟಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಾಲೇಜಿನ ವಿದ್ಯಾರ್ಥಿನಿ ಪ್ರಾಂಜಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡು ಮಾತನಾಡಿ,ಸಾಂಪ್ರದಾಯಿಕ ದಿನಾಚರಣೆ ನನಗೆ ಹೊಸ ಅನುಭವನ್ನು ತಂದು ಕೊಟ್ಟಿದೆ ಎಂದರು.
ವಿದ್ಯಾರ್ಥಿನಿ ಶೈನಿ ವಸ್ತು ಪ್ರದರ್ಶನ ಕುರಿತು ವಿವರಿಸಿ ಮಾತನಾಡಿ,ಹಳೆ ಸಾಂಪ್ರದಾಯಿಕ ಶೈಲಿಯ ವಸ್ತುಗಳ ಬಗ್ಗೆ ವಿವರಿಸಿದರು.
ಕಾಲೇಜಿನ ವಿದ್ಯಾರ್ಥಿನಿ ಸ್ನೇಹ ಹಳ್ಳಿ ಬದುಕಿನ ಜೀವನ ಪದ್ಧತಿ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡು ಮಾತನಾಡಿ,ಅವಿಭಕ್ತ ಕುಟುಂಬದ ಕುರಿತು ಮತ್ತು ಆಧುನಿಕ ಬದುಕಿನ ಚಿತ್ರಣದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನನಿರ್ದೇಶಕಿ ಮಮತಾ,ವೈಸ್ ಪ್ರಿಸ್ಸಿಪಾಲ್ ಸುಜಾತ,ಸಾಂಸ್ಕ್ರತಿಕ ವೇದಿಕೆ ಸಂಚಾಲಕಿ ರಝಿಕಾ,ಅನುಪಮ ಭಟ್ ಮತ್ತು ಶಿಕ್ಷಕವೃಂದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸನ್ನಿಧಿ ಸ್ವಾಗತಿಸಿದರು.ಸ್ವಾತಿ ನಿರೂಪಿಸಿದರು.ಪ್ರಿಯಾಂಕ ಶೆಟ್ಟಿ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago