ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.
ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಂಘದ ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಆರೋಗ್ಯ ಯೋಜನೆಯನ್ನು ಜಾರಿಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸಂಘದ ಅಭಿವೃದ್ಧಿಗೆ ಸದಸ್ಯರ ಕೊಡುಗೆ ಅಪಾರವಾದದ್ದು ಎಂದರು.
ಜನರಿಗೆ ತ್ವರಿತವಾಗಿ ಹಾಗೂ ಉತ್ತಮವಾದ ಸೇವೆ ನೀಡಬೇಕು ಎನ್ನುವ ದೃಷ್ಟಿಯಿಂದ ತ್ರಾಸಿಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಶಾಖೆಯನ್ನು ತೆರೆಯಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್.ರಾಜು ಪೂಜಾರಿ ಅವರು ಮಾತನಾಡಿ ಶುಭಹಾರೈಸಿದರು.ಎಸ್.ಕೆ ಮಂಜುನಾಥ,ಜಿಲ್ಲಾ ಸೌಹಾರ್ಧ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ,ಮಾಲತಿ ಗೋವಿಂದ ಪೂಜಾರಿ,ಸಂಸ್ಥೆಯ ನಿರ್ದೇಶಕರಾದ ಜಯರಾಮ ಶೆಟ್ಟಿ ಬಿಜೂರು,ಮಾಲತಿ ಪೂಜಾರಿ,ದೇವನ್ ಕೆ.ಪೂಜಾರಿ,ಗಿರೀಶ ಹೊಳ್ಳ, ರಾಘವೇಂದ್ರ ಪೂಜಾರಿ ನಾರಂಬಳ್ಳಿ,ಪಾರ್ವತಿ ಪೂಜಾರಿ,ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್.ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಸಂಸ್ಥೆಯ ಸಿಬ್ಬಂದಿ ನಾಗರಾಜ ಪಿ.ಯಡ್ತರೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…