ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.
ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಂಘದ ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಆರೋಗ್ಯ ಯೋಜನೆಯನ್ನು ಜಾರಿಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸಂಘದ ಅಭಿವೃದ್ಧಿಗೆ ಸದಸ್ಯರ ಕೊಡುಗೆ ಅಪಾರವಾದದ್ದು ಎಂದರು.
ಜನರಿಗೆ ತ್ವರಿತವಾಗಿ ಹಾಗೂ ಉತ್ತಮವಾದ ಸೇವೆ ನೀಡಬೇಕು ಎನ್ನುವ ದೃಷ್ಟಿಯಿಂದ ತ್ರಾಸಿಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಶಾಖೆಯನ್ನು ತೆರೆಯಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್.ರಾಜು ಪೂಜಾರಿ ಅವರು ಮಾತನಾಡಿ ಶುಭಹಾರೈಸಿದರು.ಎಸ್.ಕೆ ಮಂಜುನಾಥ,ಜಿಲ್ಲಾ ಸೌಹಾರ್ಧ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ,ಮಾಲತಿ ಗೋವಿಂದ ಪೂಜಾರಿ,ಸಂಸ್ಥೆಯ ನಿರ್ದೇಶಕರಾದ ಜಯರಾಮ ಶೆಟ್ಟಿ ಬಿಜೂರು,ಮಾಲತಿ ಪೂಜಾರಿ,ದೇವನ್ ಕೆ.ಪೂಜಾರಿ,ಗಿರೀಶ ಹೊಳ್ಳ, ರಾಘವೇಂದ್ರ ಪೂಜಾರಿ ನಾರಂಬಳ್ಳಿ,ಪಾರ್ವತಿ ಪೂಜಾರಿ,ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್.ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಸಂಸ್ಥೆಯ ಸಿಬ್ಬಂದಿ ನಾಗರಾಜ ಪಿ.ಯಡ್ತರೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…