ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.
ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಂಘದ ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಆರೋಗ್ಯ ಯೋಜನೆಯನ್ನು ಜಾರಿಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸಂಘದ ಅಭಿವೃದ್ಧಿಗೆ ಸದಸ್ಯರ ಕೊಡುಗೆ ಅಪಾರವಾದದ್ದು ಎಂದರು.
ಜನರಿಗೆ ತ್ವರಿತವಾಗಿ ಹಾಗೂ ಉತ್ತಮವಾದ ಸೇವೆ ನೀಡಬೇಕು ಎನ್ನುವ ದೃಷ್ಟಿಯಿಂದ ತ್ರಾಸಿಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಶಾಖೆಯನ್ನು ತೆರೆಯಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್.ರಾಜು ಪೂಜಾರಿ ಅವರು ಮಾತನಾಡಿ ಶುಭಹಾರೈಸಿದರು.ಎಸ್.ಕೆ ಮಂಜುನಾಥ,ಜಿಲ್ಲಾ ಸೌಹಾರ್ಧ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ,ಮಾಲತಿ ಗೋವಿಂದ ಪೂಜಾರಿ,ಸಂಸ್ಥೆಯ ನಿರ್ದೇಶಕರಾದ ಜಯರಾಮ ಶೆಟ್ಟಿ ಬಿಜೂರು,ಮಾಲತಿ ಪೂಜಾರಿ,ದೇವನ್ ಕೆ.ಪೂಜಾರಿ,ಗಿರೀಶ ಹೊಳ್ಳ, ರಾಘವೇಂದ್ರ ಪೂಜಾರಿ ನಾರಂಬಳ್ಳಿ,ಪಾರ್ವತಿ ಪೂಜಾರಿ,ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್.ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಸಂಸ್ಥೆಯ ಸಿಬ್ಬಂದಿ ನಾಗರಾಜ ಪಿ.ಯಡ್ತರೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…