ಕುಂದಾಪುರ

ಜನರ ಭಾವನೆಗಳಿಗೆ ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ- ಕೆ.ಎಸ್ ಈಶ್ವರಪ್ಪ

Share

ಬೈಂದೂರು:ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಕಿರಿಮಂಜೇಶ್ವರದಲ್ಲಿ ಬುಧವಾರ ನಡೆಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ,2030 ಬೂತ್ ಗಳಲ್ಲಿ ಬೂತ್ ಏಜೆಂಟ್ ರನ್ನು ಈಗಾಗಲೇ ನೇಮಕ ಮಾಡಲಾಗಿದೆ.ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೆಲಸವನ್ನು ಮಾಡುತ್ತಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ.ಅವರಿಗೆ ಹಿಂದುತ್ವದ ಬಗ್ಗೆ ಕಾಳಜಿ ಮತ್ತು ಆಸಕ್ತಿ ಇಲ್ಲ.ಜನರ ಭಾವನೆಗಳಿಗೆ ಮತ್ತು ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.
ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ಸಮಾಜ ಜಾಗೃತ ಗೊಳ್ಳುವುದು ಇಷ್ಟವಿಲ್ಲ.ಬಿಜೆಪಿ ಕೂಡ ಇಂತಹ ಮನಸ್ಥಿತಿಯನ್ನು ಹೊಂದಿದೆ ಎಂದು ದೂರಿದರು.ಜಿಹಾದಿ ಮನಸ್ಥಿಯಿಂದಲೆ ಹುಬ್ಬಳ್ಳಿಯಲ್ಲಿ ನೇಹಾಳ ಹತ್ಯೆಯಾಗಿದೆ.ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಭಯ ಉಂಟಾಗುತ್ತಿದೆ.ರಾಷ್ಟ್ರೀಯ ವಿಚಾರ,ರೈತರ ಪರವಾಗಿ ಚರ್ಚೆ ಮಾಡುತ್ತಿದ್ದ ಕಾಲದಲ್ಲಿ ಇಂದು ರಾಜ್ಯ ಬಿಜೆಪಿಯಲ್ಲಿ ಕುಟುಂಬ ಮತ್ತು ಜಾತಿ ರಾಜಕಾರಣ ಚರ್ಚೆ ನಡೆಯುತ್ತಿದೆ.ಜಾತಿ ಆಧಾರದ ಮೇಲೆ ಟಿಕೆಟ್ ಹಂಚಿಕೆ ನಡೆಯುತ್ತಿದೆ ಎಂದು ದೂರಿದರು.ಹಿಂದುತ್ವ ಉಳಿವಿಗಾಗಿ ಸಾಕಷ್ಟು ಹೋರಾಟಗಾರರು, ಅನೇಕ ಮೀನುಗಾರರು ನಮ್ಮ ಜೊತೆ ಇದ್ದಾರೆ ಎಂದಿಗೂ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.ಚುನಾವಣೆ ಬಳಿಕ ಬೈಂದೂರು ಕ್ಷೇತ್ರದ ಜನರ ಜೊತೆ ಕುಳಿತು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧ್ವನಯಾಗುತ್ತೇನೆ ಎಂದು ಜನರಿಗೆ ವಿಶ್ವಾಸವನ್ನು ತುಂಬಿದರು.ಕ್ರಮ ಸಂಖ್ಯೆ 08 ಕಬ್ಬಿನ ಗುರುತಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
ಹಿಂದೂ ಮುಖಂಡ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೂ ಸಮಾಜದ ಧ್ವನಿಯಾಗಿ ಈಶ್ವರಪ್ಪ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.ಸಚಿವರಾಗಿದ್ದ ಸಮಯದಲ್ಲಿ ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕಬ್ಬಿನ ಗುರುತಿಗೆ ಮತ ನೀಡಬೇಕೆಂದು ಕೇಳಿಕೊಂಡರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾಜಿ ಮೇಯರ್ ಸೀತಾಲಕ್ಷ್ಮಿ ಮಾತನಾಡಿದರು.ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಾದ ನಾಗರಾಜ ಖಾರ್ವಿ,ಸುರೇಶ ಪೂಜಾರಿ,ಶೈಲಜಾ,ಕೋಮಲ,ಮಂಗಳ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆರತಿ,ಸುವರ್ಣ ಶಂಕರ್, ಮೋಹನ ಖಾರ್ವಿ ಉಪ್ಪುಂದ,ವಿನೋದರಾಜ್ ಖಾರ್ವಿ,ಜಗದೀಶ ಖಾರ್ವಿ ಉಪಸ್ಥಿತರಿದ್ದರು.ಉಮೇಶ ಬಿಜೂರು ಸ್ವಾಗತಿಸಿದರು.ಮಹೇಶ್ ಶೇಟ್ ವಂದಿಸಿದರು.ಈಶ್ವರಪ್ಪ ಅವರನ್ನು ಮೀನುಗಾರರ ಮುಖಂಡರು ಸನ್ಮಾನಿಸಿದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago