ಕುಂದಾಪುರ

ಜನರ ಭಾವನೆಗಳಿಗೆ ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ- ಕೆ.ಎಸ್ ಈಶ್ವರಪ್ಪ

Share

ಬೈಂದೂರು:ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಕಿರಿಮಂಜೇಶ್ವರದಲ್ಲಿ ಬುಧವಾರ ನಡೆಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ,2030 ಬೂತ್ ಗಳಲ್ಲಿ ಬೂತ್ ಏಜೆಂಟ್ ರನ್ನು ಈಗಾಗಲೇ ನೇಮಕ ಮಾಡಲಾಗಿದೆ.ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೆಲಸವನ್ನು ಮಾಡುತ್ತಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ.ಅವರಿಗೆ ಹಿಂದುತ್ವದ ಬಗ್ಗೆ ಕಾಳಜಿ ಮತ್ತು ಆಸಕ್ತಿ ಇಲ್ಲ.ಜನರ ಭಾವನೆಗಳಿಗೆ ಮತ್ತು ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.
ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ಸಮಾಜ ಜಾಗೃತ ಗೊಳ್ಳುವುದು ಇಷ್ಟವಿಲ್ಲ.ಬಿಜೆಪಿ ಕೂಡ ಇಂತಹ ಮನಸ್ಥಿತಿಯನ್ನು ಹೊಂದಿದೆ ಎಂದು ದೂರಿದರು.ಜಿಹಾದಿ ಮನಸ್ಥಿಯಿಂದಲೆ ಹುಬ್ಬಳ್ಳಿಯಲ್ಲಿ ನೇಹಾಳ ಹತ್ಯೆಯಾಗಿದೆ.ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಭಯ ಉಂಟಾಗುತ್ತಿದೆ.ರಾಷ್ಟ್ರೀಯ ವಿಚಾರ,ರೈತರ ಪರವಾಗಿ ಚರ್ಚೆ ಮಾಡುತ್ತಿದ್ದ ಕಾಲದಲ್ಲಿ ಇಂದು ರಾಜ್ಯ ಬಿಜೆಪಿಯಲ್ಲಿ ಕುಟುಂಬ ಮತ್ತು ಜಾತಿ ರಾಜಕಾರಣ ಚರ್ಚೆ ನಡೆಯುತ್ತಿದೆ.ಜಾತಿ ಆಧಾರದ ಮೇಲೆ ಟಿಕೆಟ್ ಹಂಚಿಕೆ ನಡೆಯುತ್ತಿದೆ ಎಂದು ದೂರಿದರು.ಹಿಂದುತ್ವ ಉಳಿವಿಗಾಗಿ ಸಾಕಷ್ಟು ಹೋರಾಟಗಾರರು, ಅನೇಕ ಮೀನುಗಾರರು ನಮ್ಮ ಜೊತೆ ಇದ್ದಾರೆ ಎಂದಿಗೂ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.ಚುನಾವಣೆ ಬಳಿಕ ಬೈಂದೂರು ಕ್ಷೇತ್ರದ ಜನರ ಜೊತೆ ಕುಳಿತು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧ್ವನಯಾಗುತ್ತೇನೆ ಎಂದು ಜನರಿಗೆ ವಿಶ್ವಾಸವನ್ನು ತುಂಬಿದರು.ಕ್ರಮ ಸಂಖ್ಯೆ 08 ಕಬ್ಬಿನ ಗುರುತಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
ಹಿಂದೂ ಮುಖಂಡ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೂ ಸಮಾಜದ ಧ್ವನಿಯಾಗಿ ಈಶ್ವರಪ್ಪ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.ಸಚಿವರಾಗಿದ್ದ ಸಮಯದಲ್ಲಿ ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕಬ್ಬಿನ ಗುರುತಿಗೆ ಮತ ನೀಡಬೇಕೆಂದು ಕೇಳಿಕೊಂಡರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾಜಿ ಮೇಯರ್ ಸೀತಾಲಕ್ಷ್ಮಿ ಮಾತನಾಡಿದರು.ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಾದ ನಾಗರಾಜ ಖಾರ್ವಿ,ಸುರೇಶ ಪೂಜಾರಿ,ಶೈಲಜಾ,ಕೋಮಲ,ಮಂಗಳ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆರತಿ,ಸುವರ್ಣ ಶಂಕರ್, ಮೋಹನ ಖಾರ್ವಿ ಉಪ್ಪುಂದ,ವಿನೋದರಾಜ್ ಖಾರ್ವಿ,ಜಗದೀಶ ಖಾರ್ವಿ ಉಪಸ್ಥಿತರಿದ್ದರು.ಉಮೇಶ ಬಿಜೂರು ಸ್ವಾಗತಿಸಿದರು.ಮಹೇಶ್ ಶೇಟ್ ವಂದಿಸಿದರು.ಈಶ್ವರಪ್ಪ ಅವರನ್ನು ಮೀನುಗಾರರ ಮುಖಂಡರು ಸನ್ಮಾನಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago