ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.
ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ ಯುಗದಲ್ಲಿಯೂ ಅವಕಾಶಗಳು ತೆರೆದುಕೊಳ್ಳುತ್ತಿದೆ.ಭಾರತ ಜಗದ್ಗುರು ಸಾಲಿನಲ್ಲಿ ನಿಲ್ಲಬೇಕಾದರೆ ಭಾರತೀಯ ವಿದ್ಯೆಗೆ ಮಾನ್ಯತೆ ನೀಡಬೇಕಾಗಿದೆ.ಧರ್ಮ ಮಾರ್ಗದಲ್ಲಿ ಜೀವನ ನಡೆಸಬೇಕಾದರೆ ವಿದ್ಯಾರ್ಥಿಗಳಿಗೆ ಇಂತಹ ಶಿಬಿರಗಳು ಆದರ್ಶವಾಗಿರುತ್ತದೆ ಎಂದು ಹೇಳಿದರು.
ಗುರು ಶಿಷ್ಯ ಪರಂಪರೆಯಿಂದ ವೇದವೂ ಬೆಳೆದು ಬಂದಿದೆ.ವೇದವು ಪ್ರಾಚಿನವಾದ ಗ್ರಂಥವಾಗಿದ್ದು ವೇದಕ್ಕಿಂತ ಮಿಗಿಲಾದ ಗ್ರಂಥ ಜಗತ್ತಿನಲ್ಲಿ ಬೇರೆ ಯಾವುದು ಇಲ್ಲಾ.ಮನುಷ್ಯ ಜೀವನ ಸಾರ್ಥಕತೆಗೊಳ್ಳಲು ಧರ್ಮ ಮುಖ್ಯವಾಗಿದೆ.ಸನಾತನ ಧರ್ಮದ ಅಡಿಯಲ್ಲಿ ನಮ್ಮ ದೇಶದ ಸ್ತ್ರೀಯರಿಗೂ ಶಿಕ್ಷಣ ದೊರಕುತ್ತಿದ್ದು.ಸಂಸ್ಕಾರಯುತವಾದ ಶಿಕ್ಷಣವನ್ನು ಪಡೆಯುವುದರಿಂದ ಆದರ್ಶ ಜೀವನವನ್ನು ಕಂಡುಕೊಳ್ಳುವುದರ ಜತೆಗೆ ಧರ್ಮದ ರಕ್ಷಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ.ಮೂರ್ತಿ ಲೋಕೇಶ ಅಡಿಗ ಅವರು ಮಾತನಾಡಿ,ಆಧುನಿಕ ಶಿಕ್ಷಣದ ಜತೆಗೆ ಇಂದಿನ ಮಕ್ಕಳಿಗೆ ಭಾರತೀಯ ಪರಂಪರೆ ಶಿಕ್ಷಣ ನೀಡುವುದು ಮುಖ್ಯವಾಗಿದೆ.ವಿದ್ಯಾರ್ಥಿಗಳ ಜ್ಞಾನ ವೃದ್ಧಿಯಾಗಲು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇಂತಹ ಶಿಬಿರಗಳು ಬಹಳಷ್ಟು ಪ್ರಯೋಜನಕಾರಿಯಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಸಲಕ್ಷಣ ಘನಪಾಠಿಗಳು ಪ್ರಾಚಾರ್ಯರು ಸ್ವರ್ಣವಲ್ಲಿ ವೇದ.ಮೂರ್ತಿ ಉದಯ ವೈದ್ಯ ಅವರು ಮಾತನಾಡಿ,ವೈಧಿಕ ವಿಚಾರದ ಕುರಿತು ಹಾಗೂ ಕರ್ಮಾಂಗಳ ಕುರಿತು ಇಂದಿನ ಪೀಳಿಗೆಗೆ ಮಕ್ಕಳಿಗೆ ಶಿಬಿರದ ಮೂಲಕ ಕಿರು ಪರಿಚಯ ಮಾಡಿಕೊಟ್ಟಿರುವುದು ಬಹಳಷ್ಟು ಅನುಕೂಲಕರವಾಗಿದೆ.ಸಮಗ್ರ ವೇದವೂ ಬ್ರಹ್ಮನಿಂದ ಸೃಷ್ಟಿಸಲ್ಪಟ್ಟಿದೆ ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ವೇದದ ಅಧ್ಯಾಯವನ್ನು ಮಾಡುವಲ್ಲಿ ವಿದ್ಯಾರ್ಥಿಗಳು ಆಸಕ್ತಿಯನ್ನು ಹೊಂದಬೇಕಾಗಿದೆ ಎಂದು ಹೇಳಿದರು.
ಮಾಧವ ಅಡಿಗ ಅಧ್ಯಕ್ಷತೆ ವಹಿಸಿದ್ದರು.,ಡಾ.ಸುಬ್ರಹ್ಮಣ್ಯ ಉಡುಪ ಆಲೂರು,ಜೌತಿಷ್ಯ ವಿದ್ವಾನ್ ವೆಂಕಟೇಶಮೂರ್ತಿ ಎನ್.ಸಿ,ಕೃಷ್ಣಾನಂದ ಚಾತ್ರ,ವಿಶ್ರಾಂತ ಉಪನ್ಯಾಸಕ ಜನಾರ್ದನ ಮರವಂತೆ ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ:ವೇದ ಸಂರಕ್ಷರಾದ ಮಂಜುನಾಥ ಹೊಳ್ಳ ಕುಂದಾಪುರ,ವೇದ ಮೂರ್ತಿ ಗಣೇಶ ಭಟ್ ಬನ್ನಾಡಿ,ನಾಗಪಾತ್ರಿಗಳು ಶ್ರೀಧರ ಮಂಜರು ಅವರನ್ನು ಸನ್ಮಾನಿಸಲಾಯಿತು.ವೇದ ಮೂರ್ತಿ ಡಾ.ಭರತ ಐತಾಳ ಉಳ್ಳೂರು-11,ವೇದ ಮೂರ್ತಿ ನಾಗರಾಜ ಅಡಿಗ ಮಕ್ಕಿಮನೆ,ಸಾವಯವ ಕೃಷಿಕ ರಾಮಚಂದ್ರ ಭಟ್ಟ ಶಾನಾಡಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಶಿಬಿರದಲ್ಲಿ ಪಾಠ ಪ್ರವಚನ ಮಾಡಿದ ಗುರುಗಳನ್ನು ಪುರಸ್ಕರಿಸಲಾಯಿತು.ವೇದ.ಮೂರ್ತಿ ಲಕ್ಷ್ಮೀಶ ಅಡಿಗ ಸ್ವಾಗತಿಸಿದರು.ದಾಮೋದರ ಶರ್ಮಾ ನಿರೂಪಿಸಿದರು.ವೇದ ಮೂರ್ತಿ ನಾಗೇಂದ್ರ ಅಡಿಗ ವಂದಿಸಿದರು.21 ದಿನಗಳ ಕಾಲ ನಡೆದ ವಸಂತ ಶಿಬಿರದಲ್ಲಿ ಸುಮಾರು 180 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…