ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.
ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ ಯುಗದಲ್ಲಿಯೂ ಅವಕಾಶಗಳು ತೆರೆದುಕೊಳ್ಳುತ್ತಿದೆ.ಭಾರತ ಜಗದ್ಗುರು ಸಾಲಿನಲ್ಲಿ ನಿಲ್ಲಬೇಕಾದರೆ ಭಾರತೀಯ ವಿದ್ಯೆಗೆ ಮಾನ್ಯತೆ ನೀಡಬೇಕಾಗಿದೆ.ಧರ್ಮ ಮಾರ್ಗದಲ್ಲಿ ಜೀವನ ನಡೆಸಬೇಕಾದರೆ ವಿದ್ಯಾರ್ಥಿಗಳಿಗೆ ಇಂತಹ ಶಿಬಿರಗಳು ಆದರ್ಶವಾಗಿರುತ್ತದೆ ಎಂದು ಹೇಳಿದರು.
ಗುರು ಶಿಷ್ಯ ಪರಂಪರೆಯಿಂದ ವೇದವೂ ಬೆಳೆದು ಬಂದಿದೆ.ವೇದವು ಪ್ರಾಚಿನವಾದ ಗ್ರಂಥವಾಗಿದ್ದು ವೇದಕ್ಕಿಂತ ಮಿಗಿಲಾದ ಗ್ರಂಥ ಜಗತ್ತಿನಲ್ಲಿ ಬೇರೆ ಯಾವುದು ಇಲ್ಲಾ.ಮನುಷ್ಯ ಜೀವನ ಸಾರ್ಥಕತೆಗೊಳ್ಳಲು ಧರ್ಮ ಮುಖ್ಯವಾಗಿದೆ.ಸನಾತನ ಧರ್ಮದ ಅಡಿಯಲ್ಲಿ ನಮ್ಮ ದೇಶದ ಸ್ತ್ರೀಯರಿಗೂ ಶಿಕ್ಷಣ ದೊರಕುತ್ತಿದ್ದು.ಸಂಸ್ಕಾರಯುತವಾದ ಶಿಕ್ಷಣವನ್ನು ಪಡೆಯುವುದರಿಂದ ಆದರ್ಶ ಜೀವನವನ್ನು ಕಂಡುಕೊಳ್ಳುವುದರ ಜತೆಗೆ ಧರ್ಮದ ರಕ್ಷಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ.ಮೂರ್ತಿ ಲೋಕೇಶ ಅಡಿಗ ಅವರು ಮಾತನಾಡಿ,ಆಧುನಿಕ ಶಿಕ್ಷಣದ ಜತೆಗೆ ಇಂದಿನ ಮಕ್ಕಳಿಗೆ ಭಾರತೀಯ ಪರಂಪರೆ ಶಿಕ್ಷಣ ನೀಡುವುದು ಮುಖ್ಯವಾಗಿದೆ.ವಿದ್ಯಾರ್ಥಿಗಳ ಜ್ಞಾನ ವೃದ್ಧಿಯಾಗಲು ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇಂತಹ ಶಿಬಿರಗಳು ಬಹಳಷ್ಟು ಪ್ರಯೋಜನಕಾರಿಯಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಸಲಕ್ಷಣ ಘನಪಾಠಿಗಳು ಪ್ರಾಚಾರ್ಯರು ಸ್ವರ್ಣವಲ್ಲಿ ವೇದ.ಮೂರ್ತಿ ಉದಯ ವೈದ್ಯ ಅವರು ಮಾತನಾಡಿ,ವೈಧಿಕ ವಿಚಾರದ ಕುರಿತು ಹಾಗೂ ಕರ್ಮಾಂಗಳ ಕುರಿತು ಇಂದಿನ ಪೀಳಿಗೆಗೆ ಮಕ್ಕಳಿಗೆ ಶಿಬಿರದ ಮೂಲಕ ಕಿರು ಪರಿಚಯ ಮಾಡಿಕೊಟ್ಟಿರುವುದು ಬಹಳಷ್ಟು ಅನುಕೂಲಕರವಾಗಿದೆ.ಸಮಗ್ರ ವೇದವೂ ಬ್ರಹ್ಮನಿಂದ ಸೃಷ್ಟಿಸಲ್ಪಟ್ಟಿದೆ ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ವೇದದ ಅಧ್ಯಾಯವನ್ನು ಮಾಡುವಲ್ಲಿ ವಿದ್ಯಾರ್ಥಿಗಳು ಆಸಕ್ತಿಯನ್ನು ಹೊಂದಬೇಕಾಗಿದೆ ಎಂದು ಹೇಳಿದರು.
ಮಾಧವ ಅಡಿಗ ಅಧ್ಯಕ್ಷತೆ ವಹಿಸಿದ್ದರು.,ಡಾ.ಸುಬ್ರಹ್ಮಣ್ಯ ಉಡುಪ ಆಲೂರು,ಜೌತಿಷ್ಯ ವಿದ್ವಾನ್ ವೆಂಕಟೇಶಮೂರ್ತಿ ಎನ್.ಸಿ,ಕೃಷ್ಣಾನಂದ ಚಾತ್ರ,ವಿಶ್ರಾಂತ ಉಪನ್ಯಾಸಕ ಜನಾರ್ದನ ಮರವಂತೆ ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ:ವೇದ ಸಂರಕ್ಷರಾದ ಮಂಜುನಾಥ ಹೊಳ್ಳ ಕುಂದಾಪುರ,ವೇದ ಮೂರ್ತಿ ಗಣೇಶ ಭಟ್ ಬನ್ನಾಡಿ,ನಾಗಪಾತ್ರಿಗಳು ಶ್ರೀಧರ ಮಂಜರು ಅವರನ್ನು ಸನ್ಮಾನಿಸಲಾಯಿತು.ವೇದ ಮೂರ್ತಿ ಡಾ.ಭರತ ಐತಾಳ ಉಳ್ಳೂರು-11,ವೇದ ಮೂರ್ತಿ ನಾಗರಾಜ ಅಡಿಗ ಮಕ್ಕಿಮನೆ,ಸಾವಯವ ಕೃಷಿಕ ರಾಮಚಂದ್ರ ಭಟ್ಟ ಶಾನಾಡಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಶಿಬಿರದಲ್ಲಿ ಪಾಠ ಪ್ರವಚನ ಮಾಡಿದ ಗುರುಗಳನ್ನು ಪುರಸ್ಕರಿಸಲಾಯಿತು.ವೇದ.ಮೂರ್ತಿ ಲಕ್ಷ್ಮೀಶ ಅಡಿಗ ಸ್ವಾಗತಿಸಿದರು.ದಾಮೋದರ ಶರ್ಮಾ ನಿರೂಪಿಸಿದರು.ವೇದ ಮೂರ್ತಿ ನಾಗೇಂದ್ರ ಅಡಿಗ ವಂದಿಸಿದರು.21 ದಿನಗಳ ಕಾಲ ನಡೆದ ವಸಂತ ಶಿಬಿರದಲ್ಲಿ ಸುಮಾರು 180 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…