ಮಾಟುಬಲೆ ದೋಣಿ ಮೀನುಗಾರರ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಕರಾವಳಿ ಮಿತ್ರ ಮಂಡಳಿ ಮರವಂತೆ ಅದರ 25ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಾವುಂದ ವ್ಯಾಪ್ತಿಯ ಮಾಟುಬಲೆ ದೋಣಿ ಮೀನುಗಾರರ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ಮರವಂತೆಯಲ್ಲಿ ಶನಿವಾರ ನಡೆಯಿತು.

ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ ಅಧ್ಯಕ್ಷ ವಾಸುದೇವ ಖಾರ್ವಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಮೀನುಗಾರಿಕೆ ಜತೆಗೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದದ ಮನಸು ಚೇತನ್ಯ ಭರಿತವಾಗಿರುತ್ತದೆ.ಮೀನುಗಾರಿಕೆಯಲ್ಲಿ ಜೀವನವನ್ನು ಕಂಡುಕೊಂಡಿರುವ ಮೀನುಗಾರರ ಮಕ್ಕಳು ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಸುರೇಶ ಖಾರ್ವಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಯಾವುದೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಬೇಕಾದರೆ ಪ್ರೋತ್ಸಾಹ ಅತಿ ಮುಖ್ಯವಾಗಿರುತ್ತದೆ ಎಂದರು.ಕರಾವಳಿ ಮಿತ್ರ ಮಂಡಳಿ ಮರವಂತೆ ಉಪಾಧ್ಯಕ್ಷ ಬನರಾಜ್ ಖಾರ್ವಿ,ಕಾರ್ಯದರ್ಶಿ ರಮೇಶ ಖಾರ್ವಿ ಮತ್ತು ಮಾಜಿ ಅಧ್ಯಕ್ಷ ಶ್ರೀಧರ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷ ಶೇಖರ ಖಾರ್ವಿ ಉಪಸ್ಥಿತರಿದ್ದರು.ರಾಜ್ಯ ಮಟ್ಟದ ಕ್ರಿಕೆಟಿಗರಾದ ನಾಗೇಶ ಖಾರ್ವಿ ಮತ್ತು ಸೂರಜ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.

Advertisement


Share

Leave a comment

Your email address will not be published. Required fields are marked *

You cannot copy content of this page