ಕುಂದಾಪುರ:ಕರಾವಳಿ ಮಿತ್ರ ಮಂಡಳಿ ಮರವಂತೆ ಅದರ 25ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಾವುಂದ ವ್ಯಾಪ್ತಿಯ ಮಾಟುಬಲೆ ದೋಣಿ ಮೀನುಗಾರರ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ಮರವಂತೆಯಲ್ಲಿ ಶನಿವಾರ ನಡೆಯಿತು.
ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ ಅಧ್ಯಕ್ಷ ವಾಸುದೇವ ಖಾರ್ವಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಮೀನುಗಾರಿಕೆ ಜತೆಗೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದದ ಮನಸು ಚೇತನ್ಯ ಭರಿತವಾಗಿರುತ್ತದೆ.ಮೀನುಗಾರಿಕೆಯಲ್ಲಿ ಜೀವನವನ್ನು ಕಂಡುಕೊಂಡಿರುವ ಮೀನುಗಾರರ ಮಕ್ಕಳು ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.
ಸುರೇಶ ಖಾರ್ವಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಯಾವುದೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಬೇಕಾದರೆ ಪ್ರೋತ್ಸಾಹ ಅತಿ ಮುಖ್ಯವಾಗಿರುತ್ತದೆ ಎಂದರು.ಕರಾವಳಿ ಮಿತ್ರ ಮಂಡಳಿ ಮರವಂತೆ ಉಪಾಧ್ಯಕ್ಷ ಬನರಾಜ್ ಖಾರ್ವಿ,ಕಾರ್ಯದರ್ಶಿ ರಮೇಶ ಖಾರ್ವಿ ಮತ್ತು ಮಾಜಿ ಅಧ್ಯಕ್ಷ ಶ್ರೀಧರ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷ ಶೇಖರ ಖಾರ್ವಿ ಉಪಸ್ಥಿತರಿದ್ದರು.ರಾಜ್ಯ ಮಟ್ಟದ ಕ್ರಿಕೆಟಿಗರಾದ ನಾಗೇಶ ಖಾರ್ವಿ ಮತ್ತು ಸೂರಜ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…