ಕುಂದಾಪುರ

ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವ ಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಸಂಗಮ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವಭಾರತ್ ಟಿಂಬರ್ಸ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಕಳೆದ ಎಂಟು ವರ್ಷಗಳಿಂದ ಆಫ್ರಿಕಾ ದೇಶದಲ್ಲಿ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ಎಂಬ ಹೆಸರಿನಲ್ಲಿ ಮರದ ಉದ್ಯಮವನ್ನು ಮಾಡುತ್ತಿರುವ ಅಪೇಕ್ಸ್ ಸಂಸ್ಥೆ ಬಹಳಷ್ಟು ಅನುಭವವನ್ನು ಹೊಂದಿದೆ.ಅದರ ಸಹ ಸಂಸ್ಥೆಯಾದ ನವಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಆರಂಭಗೊಂಡಿದೆ. ಕಟ್ಟಡ,ದೇವಸ್ಥಾನ,ಫರ್ನಿಚರ್,ಇಂಟೀರಿಯರ್‍ಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ರೆಡಿ ಸೈಜ್,ಕಟ್ ಸೈಜ್ ಮರಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ.ಇಲ್ಲಿ ಇಂಪಾರ್ಟೆಂಟ್ ಟಿಕ್ಸ್,ಸಾಗುವಾನಿ,ಕಲ್ಲಂಬೋಗಿ,ಅಕೇಶೀಯಾ,ಬೋಗಿ,ಹಲಸು,ಹುಣಾಲ್,
ಮಹಾಗನಿ,ಹೆಬ್ಬೆಲಸು ನಂತಹ ಉತ್ತಮ ದರ್ಜೆಯ ಮರಗಳು ದೊರೆಯಲ್ಲಿದೆ.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಪೂರ್ಣಚಂದ್ರ ದೇವಾಡಿಗ ಮಾತನಾಡಿ,ಕರಾವಳಿ ತೀರದ ವಾತಾವರಣಕ್ಕೆ ಒಗ್ಗಿ ಕೊಳ್ಳುವಂತಹ ಊರಿನ ಮರಗಳು ಸಹಿತ ಉತ್ತಮ ಗುಣ ಮಟ್ಟವನ್ನು ಹೊಂದಿರುವ ಇಂಪಾರ್ಟೆಂಟ್ ಟಿಕ್ಸ್ ರೀಯಾತಿ ದರದಲ್ಲಿ ದೊರೆಯುತ್ತದೆ.ಉತ್ತಮ ರೀತಿಯ ರೆಡಿ ಸೈಜ್ ಮರಗಳನ್ನು ಖರೀದಿಸಲು ನಮ್ಮ ಸಂಸ್ಥೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭೇಟಿ ನೀಡಿ ನವ ಉದ್ಯಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಆಸೀಫ್ ಅನ್ವರ್ ಮಾತನಾಡಿ,ಅಮೇರಿಕಾ,ಆಫ್ರಿಕಾ ದೇಶಗಳ ಇಂಪಾರ್ಟೆಂಟ್ ಸಾಗುವಾನಿ ಮರ ನಮ್ಮಲ್ಲಿ ದೊರೆಯುತ್ತದೆ.ಇಲ್ಲಿನ ಹವಾಗುಣಕ್ಕೆ ಒಗ್ಗಿಕೊಳ್ಳಲಿದೆ,ಯಾವುದೇ ರೀತಿ ಸಮಸ್ಯೆ ಇಲ್ಲಾ ನೂರು ಪರ್ಸೆಂಟ್ ಗ್ಯಾರಂಟಿ ಇದೆ ಎಂದು ಹೇಳಿದರು.ಮರಗಳು ರೆಡಿ ಸೈಜ್‍ನಲ್ಲಿ ದೊರೆಯಲ್ಲಿದ್ದು.ಉತ್ತಮ ರೀತಿಯ ಆಕರ್ಷಣೆ ಮತ್ತು ಗುಣ ಮಟ್ಟವನ್ನು ಹೊಂದಿರಲಿದೆ ಎಂದು ಹೇಳಿದರು.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಚೇತನ್.ಕೆ ದೇವಾಡಿಗ ಮತ್ತು ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago