ಕುಂದಾಪುರ

ಲಿಯಾ ಜೌಟ್‍ಲೆಟ್ ಕೋಟೇಶ್ವರದಲ್ಲಿ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ಭಾರತದಲ್ಲಿ ಮೊದಲ ಬಾರಿಗೆ ಇಸ್ರೇಲಿನ ಪ್ರಸಿದ್ಧ ಹೆಟ್ರಾ ಉತ್ಪನ್ನಗಳ ಲಿಯಾ ಔಟ್‍ಲೆಟ್ ನೂತನ ಮಳಿಗೆ ಶುಭಾರಂಭ ಕಾರ್ಯಕ್ರಮ ಕುಂದಾಪುರ ತಾಲೂಕಿನ ಕೋಟೇಶ್ವರದ ಬೈಪಾಸ್ ಸಮೀಪ ಇರುವ ಸನ್ವಿಜಯ್ ಪರ್ಲ್ ಕಟ್ಟಡದಲ್ಲಿ ಭಾನುವಾರ ನಡೆಯಿತು.
ಇಸ್ರೇಲ್ ದೇಶದಲ್ಲಿ ತಯಾರಿಸಲ್ಪಡುವ ಬಹು ಬೇಡಿಕೆ ಮತ್ತು ಉತ್ತಮ ಗುಣಮಟ್ಟದ ಸನೋ ಉತ್ಪನ್ನಗಳು ಕೋಟೇಶ್ವರದ ಲಿಯಾ ಜೌಟ್‍ಲೆಟ್ ಮಳಿಗೆಯಲ್ಲಿ ದೊರಕಲಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡುವುದರ ಮುಖೇನ ನವ ಉದ್ಯಮವನ್ನು ಪ್ರೋತ್ಸಾಹಿಸ ಬೇಕಾಗಿದೆ.
ಉದ್ಯಮಿ ಅಭಿನಂಧನ್ ಶೆಟ್ಟಿ ಅವರು ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿ,ಇಸ್ರೇಲ್ ದೇಶದಲ್ಲಿ ನಿರ್ಮಿತಗೊಳ್ಳುವ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿ ದೊರೆಯುತ್ತಿರುವುದು ಬಹಳಷ್ಟು ಖುಸಿ ಕೊಡುವಂತಹ ವಿಚಾರವಾಗಿದೆ.ಬಹು ರಾಷ್ಟ್ರೀಯ ಕಂಪನಿಯ ಮಳಿಗೆ ಕೋಟೇಶ್ವರದಂತಹ ಪ್ರದೇಶದಲ್ಲಿ ಆರಂಭಗೊಂಡಿರುವುದರಿಂದ ಸ್ಥಳೀಯರಿಗೆ ಗ್ರಹ ಬಳಕೆಯ ಒಳ್ಳೆ ರೀತಿಯ ವಸ್ತುಗಳು ಸುಲಭ ರೀತಿಯಲ್ಲಿ ದೊರಕಲಿದೆ ಎಂದು ಹೇಳಿದರು.
ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಔಜ್ಲೆನ್ ರೆಬೆಲ್ಲೊ ಅವರು ಲಿಯಾ ಔಟ್‍ಲೆಟ್ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ,ನವ ಉದ್ಯಮ ಉತ್ತಮವಾದ ರೀತಿಯಲ್ಲಿ ನಡೆಯಲಿ ಎಂದು ಶುಭಹಾರೈಸಿದರು.
ಲಿಯಾ ಜೌಟ್‍ಲೆಟ್ ಎಂ.ಡಿ ಜಿ.ಕೆ ಅವಿನಾಶ ಮಾತನಾಡಿ,ಇಸ್ರೇಲ್ ದೇಶದಲ್ಲಿ ಜನಪ್ರಿಯಗೊಂಡಿರುವ ಸನೋ ಉತ್ಪನ್ನಗಳು ಕೋಟೇಶ್ವರದಲ್ಲಿ ಆರಂಭಗೊಂಡಿರುವ ಲಿಯಾ ಔಟ್‍ಲೆಟ್ ಮಳಿಗೆಯಲ್ಲಿ ದೊರಕಲಿದೆ. ಭಾರತದಲ್ಲಿ ಪ್ರಥಮವಾಗಿ ಇವೊಂದು ಮಳಿಗೆಯನ್ನು ಕೋಟೇಶ್ವರದಲ್ಲಿ ಆರಂಭಿಸಲಾಗಿದ್ದು.ಮುಂದಿನ ದಿನಗಳಲ್ಲಿ ರಾಜ್ಯ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಇತಂತಹ ಮಳಿಗೆಯನ್ನು ಸ್ಥಾಪಿಸುವ ಆಲೋಚನೆಯನ್ನು ಹೊಂದಿದ್ದೇವೆ ಎಂದರು.ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಉದ್ಯಮಿ ದಿನೇಶ್ ಜೋಗಿ ಮಾತನಾಡಿ,ಲಿಯಾಔಟ್ ಲೆಟ್ ಮಳಿಗೆಯನ್ನು ಪ್ರಥಮ ಬಾರಿಗೆ ನಮ್ಮ ಊರಿನಲ್ಲಿ ಆರಂಭಿಸಲಾಗಿದೆ.ಮುಂದಿನ ದಿನಗಳಲ್ಲಿ ಅಮೆಜಾನ್ ಮತ್ತು ಪ್ಲಿಪ್‍ಕಾರ್ಟ್‍ನಲ್ಲಿ ಬಿಡುಗಡೆ ಮಾಡಲಾಗುದು ಎಂದು ಹೇಳಿದರು.ಸ್ಥಳೀಯರು ಪ್ರೋತ್ಸಾಹ ನೀಡಬೇಕೆಂದು ವಿನಂತಿಸಿಕೊಂಡರು.
ಸಿಲ್ವಿಯಾ ಡಿಸೋಜ ಮಾತನಾಡಿ,ಉತ್ಪನ್ನಗಳನ್ನು ಸ್ವತಹ ಬಳಕೆ ಮಾಡಲಾಗಿದ್ದು.ಉತ್ತಮವಾಗಿದೆ,100 ಪರ್ಸೆಂಟ್ ಗ್ಯಾರಂಟಿ ಕೂಡ ನೀಡುತ್ತಿದ್ದೇನೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಉದ್ಯಮಿ ಹರೀಶ್ ಜೋಗಿ ಮಾತನಾಡಿ,ನವ ಉದ್ಯಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ವಿನ್ಸಿಟ್ಸ್ ಮಾತನಾಡಿ,ಉತ್ಪನ್ನಗಳ ಬಗ್ಗೆ ವಿವರಣೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೋಟೇಶ್ವರ ಪಂಚಾಯಿತಿ ಅಧ್ಯಕ್ಷೆ ರಾಗಿಣಿ ದೇವಾಡಿಗ,ಕುಂದಾಪುರ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ದೀಪಕ್ ಕುಮಾರ್,ಸಿಇಒ ಸುನೀಲ್,ಫೌಂಡರ್ ವಿಜಯ ಲೋಬೋ, ಉದ್ಯಮಿಗಳು,ಅತಿಥಿಗಳು,ಹಿತೈಷಿಗಳು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

4 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

4 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

4 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago