ಕುಂದಾಪುರ

ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ

Share

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ,ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ಶ್ರೀಬೊಬ್ಬಯ ಮತ್ತು ಪರಿವಾರ ದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಬಿಂಬ ಪ್ರತಿಷ್ಠೆ,ಕುಂಭ ಅಭಿಷೇಕ,ಅಷ್ಟೋತ್ತರ ಕಲಶ ಸ್ಥಾಪನೆ,ಬ್ರಹ್ಮಕಲಶ ಸ್ಥಾಪನೆ,ಮಹಾ ಪೂಜೆ,
ಪರಿ ಕಲಶ ಸಹಿತ ಬ್ರಹ್ಮಕಲಾಶಾಭೀಷೇಕವನ್ನು ನೆರವೇರಿಸಲಾಯಿತು.ಮಹಾ ಅನ್ನಸಂತರ್ಪಣೆ,ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ನಾರಾಯಣ ಹೆಬ್ಬಾರ್ ಮಾತನಾಡಿ,ಶ್ರೀಬೊಬ್ಬರ್ಯ ದೇವರ ದೇವಸ್ಥಾನವನ್ನು 40 ವರ್ಷಗಳ ಹಿಂದೆ ನಿರ್ಮಾಣಮಾಡಲಾಗಿದೆ.ನಾಲ್ಕು ದಶಕಗಳ ಬಳಿಕ ಶ್ರೀದೇವರ ಅನುಗ್ರಹದಿಂದ ನೂತನ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರೆ ಮಾಡಿಸಿಕೊಂಡಿದ್ದಾನೆ ಎಂದು ಹೇಳಿದರು.
ದೇವಸ್ಥಾನದ ಸದಸ್ಯರಾದ ರಾಜು.ಎನ್ ದೇವಾಡಿಗ ಮಾತನಾಡಿ,ಬಹಳಷ್ಟು ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಬೊಬ್ಬರ್ಯ ದೇವಸ್ಥಾನವನ್ನು ದಾನಿಗಳು ಮತ್ತು ಊರವರ ಸಹಕಾರದಿಂದ ಜೀರ್ಣೋದ್ಧಾರ ಗೊಳಿಸಲಾಗಿದೆ.ಕೇವಲ ಮೂರು ತಿಂಗಳ ಅವಧಿಯಲ್ಲಿ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರ ಕೃಪೆಯಿಂದಲೆ ಸಾಧ್ಯವಾಗಿದೆ.ಶ್ರೀದೇವರ ಬ್ರಹ್ಮಕಲಶೋತ್ಸವವನ್ನು ನಡೆದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದರು.
ನರಸಿಂಹ ಶೆಟ್ಟಿ ನಾಗೂರು ಅವರು ಮಾತನಾಡಿ,ಹಣಬಿನ ಸೇವೆ ಶ್ರೀಬೊಬ್ಬರ್ಯ ದೇವರಿಗೆ ಅತ್ಯಂತ ಇಷ್ಟವಾದ ಸೇವೆ ಆಗಿದೆ.ಮಹಾಶಿವರಾತ್ರಿ ಯಂದು ಊರವರು ಎಲ್ಲಾ ಒಟ್ಟಿಗೆ ಸೇರಿ ಹಣಬಿನ ಸೇವೆಯನ್ನು ನೆರವೇರಿಸುತ್ತಾರೆ ಎಂದರು.ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ಜ್ಯೋತಿಷಿ ವಿದ್ವಾನ್ ನೀಲಾವರ ರಘುರಾಮ ಮಧ್ಯಸ್ಥರು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

5 days ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

5 days ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago