ಕುಂದಾಪುರ

ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ

Share

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ,ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ಶ್ರೀಬೊಬ್ಬಯ ಮತ್ತು ಪರಿವಾರ ದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಬಿಂಬ ಪ್ರತಿಷ್ಠೆ,ಕುಂಭ ಅಭಿಷೇಕ,ಅಷ್ಟೋತ್ತರ ಕಲಶ ಸ್ಥಾಪನೆ,ಬ್ರಹ್ಮಕಲಶ ಸ್ಥಾಪನೆ,ಮಹಾ ಪೂಜೆ,
ಪರಿ ಕಲಶ ಸಹಿತ ಬ್ರಹ್ಮಕಲಾಶಾಭೀಷೇಕವನ್ನು ನೆರವೇರಿಸಲಾಯಿತು.ಮಹಾ ಅನ್ನಸಂತರ್ಪಣೆ,ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ನಾರಾಯಣ ಹೆಬ್ಬಾರ್ ಮಾತನಾಡಿ,ಶ್ರೀಬೊಬ್ಬರ್ಯ ದೇವರ ದೇವಸ್ಥಾನವನ್ನು 40 ವರ್ಷಗಳ ಹಿಂದೆ ನಿರ್ಮಾಣಮಾಡಲಾಗಿದೆ.ನಾಲ್ಕು ದಶಕಗಳ ಬಳಿಕ ಶ್ರೀದೇವರ ಅನುಗ್ರಹದಿಂದ ನೂತನ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರೆ ಮಾಡಿಸಿಕೊಂಡಿದ್ದಾನೆ ಎಂದು ಹೇಳಿದರು.
ದೇವಸ್ಥಾನದ ಸದಸ್ಯರಾದ ರಾಜು.ಎನ್ ದೇವಾಡಿಗ ಮಾತನಾಡಿ,ಬಹಳಷ್ಟು ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಬೊಬ್ಬರ್ಯ ದೇವಸ್ಥಾನವನ್ನು ದಾನಿಗಳು ಮತ್ತು ಊರವರ ಸಹಕಾರದಿಂದ ಜೀರ್ಣೋದ್ಧಾರ ಗೊಳಿಸಲಾಗಿದೆ.ಕೇವಲ ಮೂರು ತಿಂಗಳ ಅವಧಿಯಲ್ಲಿ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರ ಕೃಪೆಯಿಂದಲೆ ಸಾಧ್ಯವಾಗಿದೆ.ಶ್ರೀದೇವರ ಬ್ರಹ್ಮಕಲಶೋತ್ಸವವನ್ನು ನಡೆದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದರು.
ನರಸಿಂಹ ಶೆಟ್ಟಿ ನಾಗೂರು ಅವರು ಮಾತನಾಡಿ,ಹಣಬಿನ ಸೇವೆ ಶ್ರೀಬೊಬ್ಬರ್ಯ ದೇವರಿಗೆ ಅತ್ಯಂತ ಇಷ್ಟವಾದ ಸೇವೆ ಆಗಿದೆ.ಮಹಾಶಿವರಾತ್ರಿ ಯಂದು ಊರವರು ಎಲ್ಲಾ ಒಟ್ಟಿಗೆ ಸೇರಿ ಹಣಬಿನ ಸೇವೆಯನ್ನು ನೆರವೇರಿಸುತ್ತಾರೆ ಎಂದರು.ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ಜ್ಯೋತಿಷಿ ವಿದ್ವಾನ್ ನೀಲಾವರ ರಘುರಾಮ ಮಧ್ಯಸ್ಥರು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago