ಕುಂದಾಪುರ

ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ

Share

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ,ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ಶ್ರೀಬೊಬ್ಬಯ ಮತ್ತು ಪರಿವಾರ ದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಬಿಂಬ ಪ್ರತಿಷ್ಠೆ,ಕುಂಭ ಅಭಿಷೇಕ,ಅಷ್ಟೋತ್ತರ ಕಲಶ ಸ್ಥಾಪನೆ,ಬ್ರಹ್ಮಕಲಶ ಸ್ಥಾಪನೆ,ಮಹಾ ಪೂಜೆ,
ಪರಿ ಕಲಶ ಸಹಿತ ಬ್ರಹ್ಮಕಲಾಶಾಭೀಷೇಕವನ್ನು ನೆರವೇರಿಸಲಾಯಿತು.ಮಹಾ ಅನ್ನಸಂತರ್ಪಣೆ,ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ನಾರಾಯಣ ಹೆಬ್ಬಾರ್ ಮಾತನಾಡಿ,ಶ್ರೀಬೊಬ್ಬರ್ಯ ದೇವರ ದೇವಸ್ಥಾನವನ್ನು 40 ವರ್ಷಗಳ ಹಿಂದೆ ನಿರ್ಮಾಣಮಾಡಲಾಗಿದೆ.ನಾಲ್ಕು ದಶಕಗಳ ಬಳಿಕ ಶ್ರೀದೇವರ ಅನುಗ್ರಹದಿಂದ ನೂತನ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರೆ ಮಾಡಿಸಿಕೊಂಡಿದ್ದಾನೆ ಎಂದು ಹೇಳಿದರು.
ದೇವಸ್ಥಾನದ ಸದಸ್ಯರಾದ ರಾಜು.ಎನ್ ದೇವಾಡಿಗ ಮಾತನಾಡಿ,ಬಹಳಷ್ಟು ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಬೊಬ್ಬರ್ಯ ದೇವಸ್ಥಾನವನ್ನು ದಾನಿಗಳು ಮತ್ತು ಊರವರ ಸಹಕಾರದಿಂದ ಜೀರ್ಣೋದ್ಧಾರ ಗೊಳಿಸಲಾಗಿದೆ.ಕೇವಲ ಮೂರು ತಿಂಗಳ ಅವಧಿಯಲ್ಲಿ ಶಿಲಾಮಯ ದೇಗುಲವನ್ನು ನಿರ್ಮಿಸಲಾಗಿದ್ದು ಎಲ್ಲವೂ ದೇವರ ಕೃಪೆಯಿಂದಲೆ ಸಾಧ್ಯವಾಗಿದೆ.ಶ್ರೀದೇವರ ಬ್ರಹ್ಮಕಲಶೋತ್ಸವವನ್ನು ನಡೆದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದರು.
ನರಸಿಂಹ ಶೆಟ್ಟಿ ನಾಗೂರು ಅವರು ಮಾತನಾಡಿ,ಹಣಬಿನ ಸೇವೆ ಶ್ರೀಬೊಬ್ಬರ್ಯ ದೇವರಿಗೆ ಅತ್ಯಂತ ಇಷ್ಟವಾದ ಸೇವೆ ಆಗಿದೆ.ಮಹಾಶಿವರಾತ್ರಿ ಯಂದು ಊರವರು ಎಲ್ಲಾ ಒಟ್ಟಿಗೆ ಸೇರಿ ಹಣಬಿನ ಸೇವೆಯನ್ನು ನೆರವೇರಿಸುತ್ತಾರೆ ಎಂದರು.ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ಜ್ಯೋತಿಷಿ ವಿದ್ವಾನ್ ನೀಲಾವರ ರಘುರಾಮ ಮಧ್ಯಸ್ಥರು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago