ಕುಂದಾಪುರ

ಧಾರ್ಮಿಕ ಸಭಾ ಕಾರ್ಯಕ್ರಮ ದಾನಿಗಳಿಗೆ ಸನ್ಮಾನ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ನಡೆಯಿತು.ದಾನಿಗಳನ್ನು ಸನ್ಮಾನಿಸಲಾಯಿತು.
ಸಾಂದೀಪನಿ ಸಾಧನಾಶ್ರಮ ಶ್ರೀಕ್ಷೇತ್ರ ಕೇಮಾರು ಶ್ರೀ ಪರಮ ಪೂಜ್ಯ ಈಶವಿಠಲದಾಸ ಸ್ವಾಮಿ ಅವರು ಆಶೀರ್ವಚನಾ ನೀಡಿ ಮಾತನಾಡಿ,ಪಾಶ್ಚಿಮಾತ್ಯ ದೇಶದ ಸಂಸ್ಕøತಿಗೆ ಮಾರುಹೋಗದೆ ನಮ್ಮ ದೇಶದ ಸಂಸ್ಕøತಿಯನ್ನು ಅಳವಡಿಸಿಕೊಂಡು ಬದುಕುವುದರಿಂದ ಸಂಸ್ಕಾರಯುತವಾದ ಬದುಕನ್ನು ಕಂಡುಕೊಳ್ಳಬಹುದಾಗಿದೆ.ಮಾತೃ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕೆಂದು ಹೇಳಿದರು.
ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಊರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ಸಂಘಟಿತರಾಗಿ ಬದುಕುವುದರ ಜತೆಗೆ,ಧರ್ಮ ಜಾಗೃತಿಯ ಕುರಿತು ಅರಿವನ್ನು ಮೂಡಿಸಿದಂತಾಗುತ್ತದೆ ಎಂದರು.
ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿಗಳಾದ ಮಂಜುನಾಥ ಭಟ್ ಉಪ್ರಳ್ಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಒಳ್ಳೆ ಮನಸು ಮತ್ತು ಪರಿಶ್ರಮ ನಮ್ಮ ಜೊತೆ ಇದ್ದರೆ ಎಂತಹ ಸಂದರ್ಭವನ್ನು ಕೂಡ ಸುಲಭವಾಗಿ ಎದುರಿಸಬಹುದಾಗಿದೆ ಎನ್ನುವುದಕ್ಕೆ ಬೊಬ್ಬರ್ಯ ದೇವಸ್ಥಾನದ ನಿರ್ಮಾಣವೆ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ದೈವಸ್ಥಾನಕ್ಕೆ ಸ್ಥಳದಾನ ಮಾಡಿದವರು ವಸಂತ್ ಬಡಾಲ ಮತ್ತು ಮೋಹನ್ ಡಿ ರಾವ್ ತ್ರಾಸಿ,ಪ್ರಕಾಶ್ಚಂದ್ರ ಶೆಟ್ಟಿ,ವಾಸುದೇವ ಕಾರಂತ,ಶ್ರೀಧರ್ ಹೆಬ್ಬಾರ್,ನಾಗೇಶ್ ಜೋಗಿ,ನರಸಿಂಹ ಹಳಗೇರಿ,ಸೇವಾ ಸಮಿತಿ ಸದಸ್ಯರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ರಾಜು ಎನ್ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಈಶ್ವರ ದೇವಾಡಿಗ ಚಿತ್ರಾಡಿ ನಿರೂಪಿಸಿದರು.ಜ್ಯೋತಿಷಿ ವಿದ್ವಾನ್ ನೀಲಾವರ ರಘುರಾಮ ಮಧ್ಯಸ್ಥರು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago