ಕುಂದಾಪುರ

ಧಾರ್ಮಿಕ ಸಭಾ ಕಾರ್ಯಕ್ರಮ ದಾನಿಗಳಿಗೆ ಸನ್ಮಾನ

Share

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕಿರಿಮಂಜೇಶ್ವರ ಗುಂಜಾನುಗುಡ್ಡೆ ಶ್ರೀ ಬೊಬ್ಬರ್ಯ ಪರಿವಾರ ದೇವರ ಪುನರ್ ಪ್ರತಿಷ್ಠೆ, ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ನಡೆಯಿತು.ದಾನಿಗಳನ್ನು ಸನ್ಮಾನಿಸಲಾಯಿತು.
ಸಾಂದೀಪನಿ ಸಾಧನಾಶ್ರಮ ಶ್ರೀಕ್ಷೇತ್ರ ಕೇಮಾರು ಶ್ರೀ ಪರಮ ಪೂಜ್ಯ ಈಶವಿಠಲದಾಸ ಸ್ವಾಮಿ ಅವರು ಆಶೀರ್ವಚನಾ ನೀಡಿ ಮಾತನಾಡಿ,ಪಾಶ್ಚಿಮಾತ್ಯ ದೇಶದ ಸಂಸ್ಕøತಿಗೆ ಮಾರುಹೋಗದೆ ನಮ್ಮ ದೇಶದ ಸಂಸ್ಕøತಿಯನ್ನು ಅಳವಡಿಸಿಕೊಂಡು ಬದುಕುವುದರಿಂದ ಸಂಸ್ಕಾರಯುತವಾದ ಬದುಕನ್ನು ಕಂಡುಕೊಳ್ಳಬಹುದಾಗಿದೆ.ಮಾತೃ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕೆಂದು ಹೇಳಿದರು.
ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಊರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ಸಂಘಟಿತರಾಗಿ ಬದುಕುವುದರ ಜತೆಗೆ,ಧರ್ಮ ಜಾಗೃತಿಯ ಕುರಿತು ಅರಿವನ್ನು ಮೂಡಿಸಿದಂತಾಗುತ್ತದೆ ಎಂದರು.
ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿಗಳಾದ ಮಂಜುನಾಥ ಭಟ್ ಉಪ್ರಳ್ಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಒಳ್ಳೆ ಮನಸು ಮತ್ತು ಪರಿಶ್ರಮ ನಮ್ಮ ಜೊತೆ ಇದ್ದರೆ ಎಂತಹ ಸಂದರ್ಭವನ್ನು ಕೂಡ ಸುಲಭವಾಗಿ ಎದುರಿಸಬಹುದಾಗಿದೆ ಎನ್ನುವುದಕ್ಕೆ ಬೊಬ್ಬರ್ಯ ದೇವಸ್ಥಾನದ ನಿರ್ಮಾಣವೆ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ದೈವಸ್ಥಾನಕ್ಕೆ ಸ್ಥಳದಾನ ಮಾಡಿದವರು ವಸಂತ್ ಬಡಾಲ ಮತ್ತು ಮೋಹನ್ ಡಿ ರಾವ್ ತ್ರಾಸಿ,ಪ್ರಕಾಶ್ಚಂದ್ರ ಶೆಟ್ಟಿ,ವಾಸುದೇವ ಕಾರಂತ,ಶ್ರೀಧರ್ ಹೆಬ್ಬಾರ್,ನಾಗೇಶ್ ಜೋಗಿ,ನರಸಿಂಹ ಹಳಗೇರಿ,ಸೇವಾ ಸಮಿತಿ ಸದಸ್ಯರು,ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.ರಾಜು ಎನ್ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಈಶ್ವರ ದೇವಾಡಿಗ ಚಿತ್ರಾಡಿ ನಿರೂಪಿಸಿದರು.ಜ್ಯೋತಿಷಿ ವಿದ್ವಾನ್ ನೀಲಾವರ ರಘುರಾಮ ಮಧ್ಯಸ್ಥರು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago