ಕುಂದಾಪುರ

ಬೈಂದೂರು ಕ್ಷೇತ್ರದಲ್ಲಿ ಮತದಾನ ಆರಂಭ,ಮತಗಟ್ಟೆಗೆ ಆಗಮಿಸಿದ ಮತದಾರರು

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಕ್ಷೇತ್ರ ವ್ಯಾಪ್ತಿಯ ನಾನಾ ಮತಗಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಬೈಂದೂರು ಕ್ಷೇತ್ರದ 246 ಮತಗಟ್ಟೆಗಳಲ್ಲಿ 43 ಸೂಕ್ಷ್ಮ ಮತಗಟ್ಟೆಗಳನ್ನಾಗಿ ಪರಿಗಣಿಸಲಾಗಿದೆ.ಎಲ್ಲಾ ಸಾಮಾನ್ಯ ಮತಗಟ್ಟೆಯಲ್ಲಿ ಕನಿಷ್ಠ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.ಎಲ್ಲಾ ಮತಗಟ್ಟೆಗಳನ್ನು 16 ವಲಯ ಗಳಾಗಿ ವರ್ಗೀಕರಿಸಲಾ ಗಿದ್ದು,ಪ್ರತಿ ವಲಯದ ಮೇಲ್ವಿಚಾರಣೆಗೆ ಎಸ್ಸೈಗಳನ್ನು ನಿಯೋಜಿಸ ಲಾಗಿದೆ.16 ವಲಯಗಳನ್ನು ಪೊಲೀಸ್ ನಿರೀಕ್ಷಕರ ಶ್ರೇಣಿಯ ಮೂವರು ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.ಮೇಲ್ವಿಚಾರಣಾ ಅಧಿಕಾರಿಗಳ ಬಗ್ಗೆ ಇಬ್ಬರು ಡಿವೈಎಸ್ಪಿಗಳು ನಿಗಾ ವಹಿಸಲಿದ್ದಾರೆ.
ಮತಗಟ್ಟೆಗಳನ್ನು ವಿಶೇಷವಾದ ರೀತಿಯಲ್ಲಿ ಅಲಂಕಾರ ಮಾಡಲಾಗಿದ್ದು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಜನರು ಆಸಕ್ತಿಯಿಂದ ಮತ ಕೇಂದ್ರಕ್ಕೆ ಗಮನಿಸಿ ತಮ್ಮ ಇಷ್ಟದ ಅಭ್ಯರ್ಥಿಗೆ ಮತ ಹಾಕುವುದರ ಮುಖೇನ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ವಯೋವೃದ್ಧರು,ಅನಾರೋಗ್ಯ ಪೀಡಿತರು,ಅಂಗವೀಕಲರು, ವಿಶೇಷ ಚೇತನ ವ್ಯಕ್ತಿಗಳು ಮತದಾನ ಪ್ರಕ್ರಿಯೆಯಲ್ಲಿ ತೊಡಗಿ ಕೊಂಡಿದ್ದಾರೆ.
ಬೆಳಗಿನಿಂದಲೇ ಜನರು ಮತಗಟ್ಟೆ ಕಡೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತವನ್ನು ಹಾಕಿದರು.ಯುವ ಮತದಾರರು ಸೇಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ.ಮತದಾನ ಮಾಡಿದವರು ಮತಗಟ್ಟೆ ತೆರಳಿ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು.ಶೇಕಡಾ ನೂರು ಮತದಾನ ಆಗುವಂತೆ ನೋಡಿಕೊಳ್ಳಬೇಕಾಗಿದೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago