ಕುಂದಾಪುರ

ಬೈಂದೂರು ಕ್ಷೇತ್ರದಲ್ಲಿ ಮತದಾನ ಆರಂಭ,ಮತಗಟ್ಟೆಗೆ ಆಗಮಿಸಿದ ಮತದಾರರು

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಕ್ಷೇತ್ರ ವ್ಯಾಪ್ತಿಯ ನಾನಾ ಮತಗಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಬೈಂದೂರು ಕ್ಷೇತ್ರದ 246 ಮತಗಟ್ಟೆಗಳಲ್ಲಿ 43 ಸೂಕ್ಷ್ಮ ಮತಗಟ್ಟೆಗಳನ್ನಾಗಿ ಪರಿಗಣಿಸಲಾಗಿದೆ.ಎಲ್ಲಾ ಸಾಮಾನ್ಯ ಮತಗಟ್ಟೆಯಲ್ಲಿ ಕನಿಷ್ಠ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.ಎಲ್ಲಾ ಮತಗಟ್ಟೆಗಳನ್ನು 16 ವಲಯ ಗಳಾಗಿ ವರ್ಗೀಕರಿಸಲಾ ಗಿದ್ದು,ಪ್ರತಿ ವಲಯದ ಮೇಲ್ವಿಚಾರಣೆಗೆ ಎಸ್ಸೈಗಳನ್ನು ನಿಯೋಜಿಸ ಲಾಗಿದೆ.16 ವಲಯಗಳನ್ನು ಪೊಲೀಸ್ ನಿರೀಕ್ಷಕರ ಶ್ರೇಣಿಯ ಮೂವರು ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.ಮೇಲ್ವಿಚಾರಣಾ ಅಧಿಕಾರಿಗಳ ಬಗ್ಗೆ ಇಬ್ಬರು ಡಿವೈಎಸ್ಪಿಗಳು ನಿಗಾ ವಹಿಸಲಿದ್ದಾರೆ.
ಮತಗಟ್ಟೆಗಳನ್ನು ವಿಶೇಷವಾದ ರೀತಿಯಲ್ಲಿ ಅಲಂಕಾರ ಮಾಡಲಾಗಿದ್ದು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಜನರು ಆಸಕ್ತಿಯಿಂದ ಮತ ಕೇಂದ್ರಕ್ಕೆ ಗಮನಿಸಿ ತಮ್ಮ ಇಷ್ಟದ ಅಭ್ಯರ್ಥಿಗೆ ಮತ ಹಾಕುವುದರ ಮುಖೇನ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ವಯೋವೃದ್ಧರು,ಅನಾರೋಗ್ಯ ಪೀಡಿತರು,ಅಂಗವೀಕಲರು, ವಿಶೇಷ ಚೇತನ ವ್ಯಕ್ತಿಗಳು ಮತದಾನ ಪ್ರಕ್ರಿಯೆಯಲ್ಲಿ ತೊಡಗಿ ಕೊಂಡಿದ್ದಾರೆ.
ಬೆಳಗಿನಿಂದಲೇ ಜನರು ಮತಗಟ್ಟೆ ಕಡೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತವನ್ನು ಹಾಕಿದರು.ಯುವ ಮತದಾರರು ಸೇಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ.ಮತದಾನ ಮಾಡಿದವರು ಮತಗಟ್ಟೆ ತೆರಳಿ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು.ಶೇಕಡಾ ನೂರು ಮತದಾನ ಆಗುವಂತೆ ನೋಡಿಕೊಳ್ಳಬೇಕಾಗಿದೆ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago