ಕುಂದಾಪುರ

ಬೈಂದೂರು ಕ್ಷೇತ್ರದಲ್ಲಿ ಮತದಾನ ಆರಂಭ,ಮತಗಟ್ಟೆಗೆ ಆಗಮಿಸಿದ ಮತದಾರರು

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಕ್ಷೇತ್ರ ವ್ಯಾಪ್ತಿಯ ನಾನಾ ಮತಗಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಬೈಂದೂರು ಕ್ಷೇತ್ರದ 246 ಮತಗಟ್ಟೆಗಳಲ್ಲಿ 43 ಸೂಕ್ಷ್ಮ ಮತಗಟ್ಟೆಗಳನ್ನಾಗಿ ಪರಿಗಣಿಸಲಾಗಿದೆ.ಎಲ್ಲಾ ಸಾಮಾನ್ಯ ಮತಗಟ್ಟೆಯಲ್ಲಿ ಕನಿಷ್ಠ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.ಎಲ್ಲಾ ಮತಗಟ್ಟೆಗಳನ್ನು 16 ವಲಯ ಗಳಾಗಿ ವರ್ಗೀಕರಿಸಲಾ ಗಿದ್ದು,ಪ್ರತಿ ವಲಯದ ಮೇಲ್ವಿಚಾರಣೆಗೆ ಎಸ್ಸೈಗಳನ್ನು ನಿಯೋಜಿಸ ಲಾಗಿದೆ.16 ವಲಯಗಳನ್ನು ಪೊಲೀಸ್ ನಿರೀಕ್ಷಕರ ಶ್ರೇಣಿಯ ಮೂವರು ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.ಮೇಲ್ವಿಚಾರಣಾ ಅಧಿಕಾರಿಗಳ ಬಗ್ಗೆ ಇಬ್ಬರು ಡಿವೈಎಸ್ಪಿಗಳು ನಿಗಾ ವಹಿಸಲಿದ್ದಾರೆ.
ಮತಗಟ್ಟೆಗಳನ್ನು ವಿಶೇಷವಾದ ರೀತಿಯಲ್ಲಿ ಅಲಂಕಾರ ಮಾಡಲಾಗಿದ್ದು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಜನರು ಆಸಕ್ತಿಯಿಂದ ಮತ ಕೇಂದ್ರಕ್ಕೆ ಗಮನಿಸಿ ತಮ್ಮ ಇಷ್ಟದ ಅಭ್ಯರ್ಥಿಗೆ ಮತ ಹಾಕುವುದರ ಮುಖೇನ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ವಯೋವೃದ್ಧರು,ಅನಾರೋಗ್ಯ ಪೀಡಿತರು,ಅಂಗವೀಕಲರು, ವಿಶೇಷ ಚೇತನ ವ್ಯಕ್ತಿಗಳು ಮತದಾನ ಪ್ರಕ್ರಿಯೆಯಲ್ಲಿ ತೊಡಗಿ ಕೊಂಡಿದ್ದಾರೆ.
ಬೆಳಗಿನಿಂದಲೇ ಜನರು ಮತಗಟ್ಟೆ ಕಡೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತವನ್ನು ಹಾಕಿದರು.ಯುವ ಮತದಾರರು ಸೇಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ.ಮತದಾನ ಮಾಡಿದವರು ಮತಗಟ್ಟೆ ತೆರಳಿ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು.ಶೇಕಡಾ ನೂರು ಮತದಾನ ಆಗುವಂತೆ ನೋಡಿಕೊಳ್ಳಬೇಕಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago