ಕುಂದಾಪುರ

ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭ

Share

Advertisement
Advertisement

ಕುಂದಾಪುರ:ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ.ಜಪಾನ್ ದೇಶದ ಕಾಂಗೆನ್ ಸಂಸ್ಥೆ ವಿಶ್ವದ ಸುಮಾರು 165 ದೇಶಗಳಲ್ಲಿ ಕಾರ್ಯಚರಿಸುತ್ತಿದೆ.ಸೇವೆಯಲ್ಲಿ ಉತ್ತಮ ದರ್ಜೆಯನ್ನು ಹೊಂದಿರುವ ಕೆಡಿಸಿ ಕಾಂಗೆನ್ ಸಂಸ್ಥೆ ಭಾರತದ ನಾನಾ ರಾಜ್ಯಗಳಲ್ಲಿ ತನ್ನ ಸಂಸ್ಥೆಯನ್ನು ಹೊಂದಿದ್ದು ಜನ ಪ್ರೀತಿಗೆ ಪಾತ್ರವಾಗಿದೆ.ವಾಸುದೇವ ಹೊಳ್ಳ ಅವರ ನೇತೃತ್ವದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭಗೊಂಡಿದ್ದು ಕಾಂಗೆನ್ ವಾಟರ್ ಮೆಷಿನ್ ಅನ್ನು ಪಡೆದುಕೊಳ್ಳಲು ಗ್ರಾಹಕರು ಅವರನ್ನು ಸಂಪರ್ಕಿಸಬಹುದು.
ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಕೋಟೇಶ್ವರ ವಾಸುದೇವ ಹೊಳ್ಳ ಅವರು ಮಾತನಾಡಿ,ವಿಶ್ವಾದ್ಯಂತ ಜನಪ್ರಿಯಗೊಂಡಿರುವ ಕಾಂಗೆನ್ ವಾಟರ್‍ನ್ನು ಸ್ವತ ತಾನು ಬಳಕೆ ಮಾಡಿದ್ದು ನೂರಕ್ಕೆ ನೂರಷ್ಟು ಫಲಿತಾಂಶ ಇದೆ.ಜನರಿಗೆ ಗುಣಮಟ್ಟದ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಕೋಟೇಶ್ವರದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಆರಂಭಿಸಲಾಗಿದೆ.ಕಛೇರಿಯಲ್ಲಿ ಪ್ರತಿ ಬುಧವಾರ ಕಾಂಗೆನ್ ವಾಟರ್ ಬಳಕೆ ಮತ್ತು ಪ್ರಯೋಜನಾ ಗುರಿತು ಮಾಹಿತಿ ಕಾರ್ಯಕ್ರಮವನ್ನು ಮಾಡಲಾಗುತ್ತದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಡಾ.ಶ್ರೀದೇವಿ ಕಟ್ಟೆ ಚಿನ್ಮಯಿ ಆಸ್ಪತ್ರೆ ಕುಂದಾಪುರ ಅವರು ಕಾಂಗೆನ್ ವಾಟರ್ ಕಚೇರಿಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ,ಒಳ್ಳೆ ಉದ್ದೇಶದೊಂದಿಗೆ ಆರಂಭಿಸಿರುವ ಇವೊಂದು ಉದ್ಯಮವು ಉತ್ತರೋತ್ತರವಾಗಿ ಬೆಳೆಯಲಿ ಎಂದು ಶುಭಾಹಾರೈಸಿದರು.
ರಾಜೇಶ್ ನಾಯರ್ ಅವರು ಕಾಂಗೆನ್ ವಾಟರ್ ಪ್ರಯೋಜನತೆ ಕುರಿತು ವಿವರಿಸಿ ಮಾತನಾಡಿ,ಎಲ್ಲಾ ಕಾಯಿಲೆಗಳಿಗೆ ನೀರು ಮದ್ದಾಗಿದೆ.ಶುದ್ಧವಾದ ನೀರನ್ನು ಕುಡಿಯುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿ ಆಗಿದೆ.ನಮ್ಮ ಜೀವನದ ಕ್ರಮದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಹೇಳಿದರು.
ಗಣೆಶ್ ಅವರು ಪ್ರಾತ್ಯಾಕ್ಷತೆ ಮೂಲಕ ಕಾಂಗೆನ್ ವಾಟರ್ ಕುರಿತು ಮಾಹಿತಿ ನೀಡಿ ಮಾತನಾಡಿ,ಜಗತ್ತಿನಲ್ಲೆ ಅತ್ಯಂತ ಆರೋಗ್ಯ ಪೂರ್ಣತೆಯಿಂದ ಕೂಡಿದ ಕಾಂಗೆನ್ ವಾಟರ್ ಸಂಸ್ಥೆ ಕೋಟೇಶ್ವರದಲ್ಲಿ ಆರಂಭಗೊಂಡಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.ಉಲ್ಲಾಸ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.
ವರದಿ-ಜಗದೀಶ
ಸುದ್ದಿ ಮತ್ತು ಜಾಹೀರಾತು ಪ್ರಕಟಿಸಲು ಸಂಪರ್ಕಿಸಿ-9141825696

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago