ಕುಂದಾಪುರ

ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭ

Share

ಕುಂದಾಪುರ:ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ.ಜಪಾನ್ ದೇಶದ ಕಾಂಗೆನ್ ಸಂಸ್ಥೆ ವಿಶ್ವದ ಸುಮಾರು 165 ದೇಶಗಳಲ್ಲಿ ಕಾರ್ಯಚರಿಸುತ್ತಿದೆ.ಸೇವೆಯಲ್ಲಿ ಉತ್ತಮ ದರ್ಜೆಯನ್ನು ಹೊಂದಿರುವ ಕೆಡಿಸಿ ಕಾಂಗೆನ್ ಸಂಸ್ಥೆ ಭಾರತದ ನಾನಾ ರಾಜ್ಯಗಳಲ್ಲಿ ತನ್ನ ಸಂಸ್ಥೆಯನ್ನು ಹೊಂದಿದ್ದು ಜನ ಪ್ರೀತಿಗೆ ಪಾತ್ರವಾಗಿದೆ.ವಾಸುದೇವ ಹೊಳ್ಳ ಅವರ ನೇತೃತ್ವದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭಗೊಂಡಿದ್ದು ಕಾಂಗೆನ್ ವಾಟರ್ ಮೆಷಿನ್ ಅನ್ನು ಪಡೆದುಕೊಳ್ಳಲು ಗ್ರಾಹಕರು ಅವರನ್ನು ಸಂಪರ್ಕಿಸಬಹುದು.
ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಕೋಟೇಶ್ವರ ವಾಸುದೇವ ಹೊಳ್ಳ ಅವರು ಮಾತನಾಡಿ,ವಿಶ್ವಾದ್ಯಂತ ಜನಪ್ರಿಯಗೊಂಡಿರುವ ಕಾಂಗೆನ್ ವಾಟರ್‍ನ್ನು ಸ್ವತ ತಾನು ಬಳಕೆ ಮಾಡಿದ್ದು ನೂರಕ್ಕೆ ನೂರಷ್ಟು ಫಲಿತಾಂಶ ಇದೆ.ಜನರಿಗೆ ಗುಣಮಟ್ಟದ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಕೋಟೇಶ್ವರದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಆರಂಭಿಸಲಾಗಿದೆ.ಕಛೇರಿಯಲ್ಲಿ ಪ್ರತಿ ಬುಧವಾರ ಕಾಂಗೆನ್ ವಾಟರ್ ಬಳಕೆ ಮತ್ತು ಪ್ರಯೋಜನಾ ಗುರಿತು ಮಾಹಿತಿ ಕಾರ್ಯಕ್ರಮವನ್ನು ಮಾಡಲಾಗುತ್ತದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಡಾ.ಶ್ರೀದೇವಿ ಕಟ್ಟೆ ಚಿನ್ಮಯಿ ಆಸ್ಪತ್ರೆ ಕುಂದಾಪುರ ಅವರು ಕಾಂಗೆನ್ ವಾಟರ್ ಕಚೇರಿಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ,ಒಳ್ಳೆ ಉದ್ದೇಶದೊಂದಿಗೆ ಆರಂಭಿಸಿರುವ ಇವೊಂದು ಉದ್ಯಮವು ಉತ್ತರೋತ್ತರವಾಗಿ ಬೆಳೆಯಲಿ ಎಂದು ಶುಭಾಹಾರೈಸಿದರು.
ರಾಜೇಶ್ ನಾಯರ್ ಅವರು ಕಾಂಗೆನ್ ವಾಟರ್ ಪ್ರಯೋಜನತೆ ಕುರಿತು ವಿವರಿಸಿ ಮಾತನಾಡಿ,ಎಲ್ಲಾ ಕಾಯಿಲೆಗಳಿಗೆ ನೀರು ಮದ್ದಾಗಿದೆ.ಶುದ್ಧವಾದ ನೀರನ್ನು ಕುಡಿಯುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿ ಆಗಿದೆ.ನಮ್ಮ ಜೀವನದ ಕ್ರಮದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಹೇಳಿದರು.
ಗಣೆಶ್ ಅವರು ಪ್ರಾತ್ಯಾಕ್ಷತೆ ಮೂಲಕ ಕಾಂಗೆನ್ ವಾಟರ್ ಕುರಿತು ಮಾಹಿತಿ ನೀಡಿ ಮಾತನಾಡಿ,ಜಗತ್ತಿನಲ್ಲೆ ಅತ್ಯಂತ ಆರೋಗ್ಯ ಪೂರ್ಣತೆಯಿಂದ ಕೂಡಿದ ಕಾಂಗೆನ್ ವಾಟರ್ ಸಂಸ್ಥೆ ಕೋಟೇಶ್ವರದಲ್ಲಿ ಆರಂಭಗೊಂಡಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.ಉಲ್ಲಾಸ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.
ವರದಿ-ಜಗದೀಶ
ಸುದ್ದಿ ಮತ್ತು ಜಾಹೀರಾತು ಪ್ರಕಟಿಸಲು ಸಂಪರ್ಕಿಸಿ-9141825696

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago