ಕುಂದಾಪುರ

ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ಕೆಡಿಸಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ.ಜಪಾನ್ ದೇಶದ ಕಾಂಗೆನ್ ಸಂಸ್ಥೆ ವಿಶ್ವದ ಸುಮಾರು 165 ದೇಶಗಳಲ್ಲಿ ಕಾರ್ಯಚರಿಸುತ್ತಿದೆ.ಸೇವೆಯಲ್ಲಿ ಉತ್ತಮ ದರ್ಜೆಯನ್ನು ಹೊಂದಿರುವ ಕೆಡಿಸಿ ಕಾಂಗೆನ್ ಸಂಸ್ಥೆ ಭಾರತದ ನಾನಾ ರಾಜ್ಯಗಳಲ್ಲಿ ತನ್ನ ಸಂಸ್ಥೆಯನ್ನು ಹೊಂದಿದ್ದು ಜನ ಪ್ರೀತಿಗೆ ಪಾತ್ರವಾಗಿದೆ.ವಾಸುದೇವ ಹೊಳ್ಳ ಅವರ ನೇತೃತ್ವದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಕೋಟೇಶ್ವರದಲ್ಲಿ ಶುಭಾರಂಭಗೊಂಡಿದ್ದು ಕಾಂಗೆನ್ ವಾಟರ್ ಮೆಷಿನ್ ಅನ್ನು ಪಡೆದುಕೊಳ್ಳಲು ಗ್ರಾಹಕರು ಅವರನ್ನು ಸಂಪರ್ಕಿಸಬಹುದು.
ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಕೋಟೇಶ್ವರ ವಾಸುದೇವ ಹೊಳ್ಳ ಅವರು ಮಾತನಾಡಿ,ವಿಶ್ವಾದ್ಯಂತ ಜನಪ್ರಿಯಗೊಂಡಿರುವ ಕಾಂಗೆನ್ ವಾಟರ್‍ನ್ನು ಸ್ವತ ತಾನು ಬಳಕೆ ಮಾಡಿದ್ದು ನೂರಕ್ಕೆ ನೂರಷ್ಟು ಫಲಿತಾಂಶ ಇದೆ.ಜನರಿಗೆ ಗುಣಮಟ್ಟದ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಕೋಟೇಶ್ವರದಲ್ಲಿ ಕಾಂಗೆನ್ ಡಿಸ್ಟ್ರಿಬ್ಯೂಟರ್ಸ್ ಸೆಂಟರ್ ಆರಂಭಿಸಲಾಗಿದೆ.ಕಛೇರಿಯಲ್ಲಿ ಪ್ರತಿ ಬುಧವಾರ ಕಾಂಗೆನ್ ವಾಟರ್ ಬಳಕೆ ಮತ್ತು ಪ್ರಯೋಜನಾ ಗುರಿತು ಮಾಹಿತಿ ಕಾರ್ಯಕ್ರಮವನ್ನು ಮಾಡಲಾಗುತ್ತದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಡಾ.ಶ್ರೀದೇವಿ ಕಟ್ಟೆ ಚಿನ್ಮಯಿ ಆಸ್ಪತ್ರೆ ಕುಂದಾಪುರ ಅವರು ಕಾಂಗೆನ್ ವಾಟರ್ ಕಚೇರಿಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ,ಒಳ್ಳೆ ಉದ್ದೇಶದೊಂದಿಗೆ ಆರಂಭಿಸಿರುವ ಇವೊಂದು ಉದ್ಯಮವು ಉತ್ತರೋತ್ತರವಾಗಿ ಬೆಳೆಯಲಿ ಎಂದು ಶುಭಾಹಾರೈಸಿದರು.
ರಾಜೇಶ್ ನಾಯರ್ ಅವರು ಕಾಂಗೆನ್ ವಾಟರ್ ಪ್ರಯೋಜನತೆ ಕುರಿತು ವಿವರಿಸಿ ಮಾತನಾಡಿ,ಎಲ್ಲಾ ಕಾಯಿಲೆಗಳಿಗೆ ನೀರು ಮದ್ದಾಗಿದೆ.ಶುದ್ಧವಾದ ನೀರನ್ನು ಕುಡಿಯುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿ ಆಗಿದೆ.ನಮ್ಮ ಜೀವನದ ಕ್ರಮದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಹೇಳಿದರು.
ಗಣೆಶ್ ಅವರು ಪ್ರಾತ್ಯಾಕ್ಷತೆ ಮೂಲಕ ಕಾಂಗೆನ್ ವಾಟರ್ ಕುರಿತು ಮಾಹಿತಿ ನೀಡಿ ಮಾತನಾಡಿ,ಜಗತ್ತಿನಲ್ಲೆ ಅತ್ಯಂತ ಆರೋಗ್ಯ ಪೂರ್ಣತೆಯಿಂದ ಕೂಡಿದ ಕಾಂಗೆನ್ ವಾಟರ್ ಸಂಸ್ಥೆ ಕೋಟೇಶ್ವರದಲ್ಲಿ ಆರಂಭಗೊಂಡಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.ಉಲ್ಲಾಸ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.
ವರದಿ-ಜಗದೀಶ
ಸುದ್ದಿ ಮತ್ತು ಜಾಹೀರಾತು ಪ್ರಕಟಿಸಲು ಸಂಪರ್ಕಿಸಿ-9141825696

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago