ಕುಂದಾಪುರ

ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್.

Share

ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ. ಪ್ರಥ್ವಿತಾ ಪಿ ಶೆಟ್ಟಿ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಗಳಿಸಿದ್ದು ಕುಂದಾಪುರ ತಾಲೂಕಿಗೆ ಪ್ರಥಮ 621(99.36%) ಅಂಕಗಳು, ಶಾಧನಾ ದೇವಾಡಿಗ ರಾಜ್ಯ ಮಟ್ಟದಲ್ಲಿ 10ನೆಯ ರ್ಯಾಂಕ್‍ಗಳಿಸಿದ್ದು , ಕುಂದಾಪುರ ತಾಲೂಕಿಗೆ 6ನೆಯ ಸ್ಥಾನ ಪಡೆದಿದ್ದು, 616(98.56%) ಅಂಕಗಳನ್ನು ಗಳಿಸಿರುತ್ತಾರೆ. ಅಲ್ಲದೆ ಬಸನಗೌಡ ಪಾಟೀಲ್ 610 (97.6), ಕೆ ಶ್ರೀಶಾ ಶೆಟ್ಟಿ 610(97.6), ನಿಝಾ 608 (97.28), ಸನ್ನಿಧಿ 606 (96.96), ಸುಶ್ಮಿತಾ ಸುಕಾಲಿ 605 (96.8), ದಿವಿತ್ ಕುಮಾರ್ ಶೆಟ್ಟಿ 602 (96.32), ಸೃಜನ್ ಜೆ ಶೆಟ್ಟಿ 601 (96.16), ಐಶ್ವರ್ಯ ಬಿ ಆಚಾರ್ಯ್ 591 (94.56), ಸನ್ಸಿತಾ 588 (94.08), ಸಂದೀಪ್ ರೆಡ್ಡಿ ವಿ 587 (93.92), ವಿದ್ಯಾಶ್ರೀ 585 (93.60), ಕೃತಿ ಕೆ ಶೆಟ್ಟಿ 582 (93.12), ಲತಿಕಾ 581 (92.96) ಅಂಕಗಳನ್ನು ಪಡೆದಿದ್ದಾರೆ.ಸಂಸ್ಥೆಯಲ್ಲಿ ಪರೀಕ್ಷೆ ಬರೆದ 79 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ 38 ವಿದ್ಯಾರ್ಥಿಗಳು,ಪ್ರಥಮ ಶ್ರೇಣಿಯಲ್ಲಿ 40 ವಿದ್ಯಾರ್ಥಿಗಳು,ದ್ವಿತೀಯ ಶ್ರೇಣಿಯಲ್ಲಿ 01 ವಿದ್ಯಾರ್ಥಿಯು ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಎಮ್.ಎಮ್ ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಎಮ್. ಮಹೇಶ್ ಹೆಗ್ಢೆ,ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ,ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖೋಪಾಧ್ಯಾಯರು ಸಂತಸ ವ್ಯಕ್ತಪಡಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.ವಿದ್ಯಾರ್ಥಿಗಳ ಅಪೂರ್ವ ಸಾಧನೆಗೆ ಕಾರಣಿಕರ್ತರಾದ ಅಧ್ಯಾಪಕ ವರ್ಗ ಶಾಲಾ ಸಿಬ್ಬಂದಿಗಳು ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

“ನಮ್ಮ ಶಾಲೆಯ ಶಿಕ್ಷಕರು ಸಂಜೆ 6 ರ ತನಕ ನಮ್ಮ ಜೊತೆ ನಿಂತು ನಿರಂತರ ತರಬೇತಿ ನೀಡಿರುವುದು ಈ ಅಂಕ ಗಳಿಸಲು ಸಹಕಾರಿಯಾಯಿತು, ಮತ್ತು ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ,ಭೋದಕೇತರ ಸಿಬ್ಬಂಧಿ ವರ್ಗ ಮತ್ತು ಪೋಷಕರಿಗೆ ಚಿರರುಣಿಯಾಗಿದ್ದೇನೆ”
-ಪ್ರಥ್ವಿತಾ ಪಿ ಶೆಟ್ಟಿ ಎಸ್. ಎಸ್. ಎಲ್ ಸಿ. 2024ರ ಪರೀಕ್ಷೆಯಲ್ಲಿ ರಾಜ್ಯದಲ್ಲಿ 5ನೇ ರ್ಯಾಂಕ್ ಪಡೆದ ವಿದ್ಯಾರ್ಥಿ

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago