ಕುಂದಾಪುರ

ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ಪ್ರತ್ವಿತಾ ಪಿ ಶೆಟ್ಟಿ ಐ.ಎ.ಎಸ್ ಅಧಿಕಾರಿಯಾಗುವ ಆಸೆ

Share

ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲ್‍ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ,ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐ.ಎ.ಏಸ್ ಅಧಿಕಾರಿಯಾಗುವ ಆಸೆಯಿದೆ, ನಮ್ಮ ಶಾಲೆಯ ಶಿಕ್ಷಕರು ಸಂಜೆ 6 ರ ತನಕ ನಮ್ಮ ಜೊತೆ ನಿಂತು ನಿರಂತರ ತರಬೇತಿ ನೀಡಿರುವುದು ಈ ಅಂಕ ಗಳಿಸಲು ಸಹಕಾರಿಯಾಯಿತು, ಮತ್ತು ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ,ಭೋದಕೇತರ ಸಿಬ್ಬಂಧಿ ವರ್ಗ ಮತ್ತು ಪೋಷಕರಿಗೆ ಚಿರರುಣಿಯಾಗಿದ್ದೇನೆ ಎಂದರು.
ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‍ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago