ಕುಂದಾಪುರ

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾಲು ಸಂಕ ಪರಿಶೀಲನೆ

Share

ಕುಂದಾಪುರ:ಸಮೃದ್ಧ ಬೈಂದೂರು ಟ್ರಸ್ಟ್‌ ಹಾಗೂ ಅರುಣಾಚಲಂ ಟ್ರಸ್ಟ್‌ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಶಾಸಕ ಗುರುರಾಜ್ ಗಂಟಿಹೊಳೆಯವರು ಭಾನುವಾರ ನಡೆಸಿದರು.
ಕಾಡಂಚಿನ ಪ್ರದೇಶವಾದ ತೊಂಬಟ್ಟು ಕಬ್ಬಿನಾಲೆ ಸಮೀಪ,ಯಡಮೊಗೆ ಕುಂಮ್ಟಿಬೇರುವಿನಲ್ಲಿ ಹಾಗೂ ವಂಡ್ಸೆ ಅಬ್ಬಿಯಲ್ಲಿ ನಿರ್ಮಾಣ ವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು,ಬೈಂದೂರು ಕ್ಷೇತ್ರದ ವಿವಿಧ ಭಾಗದಲ್ಲಿ ಕಾಲು ಸಂಕಗಳ ತುರ್ತು ಅಗತ್ಯವಿದೆ.ಆ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಹಾಗೂ ಅರುಣಾಚಲಂ ಟ್ರಸ್ಟ್‌‌ನ ಒಡಂಬಡಿಕೆಯೊಂದಿಗೆ ಕೆಲವು ಕಡೆಗಳಲ್ಲಿ ಕಾಲು ಸಂಕಗಳನ್ನು ವಿನೂತನ ಆವಿಷ್ಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶ ಹೊಂದಿರುವ ಭಾಗದ ಕೂಗ್ರಾಮದಲ್ಲಿ ಕಾಲು ಸಂಕಗಳ ನಿರ್ಮಾಣ ಆಗಬೇಕಿದೆ.ಕಾಲು ಸಂಕಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.
ಅರುಣಾಚಲಂ ಟ್ರಸ್ಟ್ ನಿಂದ ಹಂತ ಹಂತವಾಗಿ ಸುಮಾರು 50 ಕಡೆಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡುವ ಭರವಸೆ ಸಿಕ್ಕಿದೆ.ಮುಂಬರುವ ಮಳೆಗಾಲದೊಳಗೆ ಪ್ರಗತಿಯಲ್ಲಿರುವ ಮೂರು ಕಾಲು ಸಂಕಗಳು ಸಿದ್ಧವಾಗಲಿದೆ.ಕ್ಷೇತ್ರದ ಜನತೆ ಕಾಲು ಸಂಕ ಇಲ್ಲದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಅರುಣಾಚಲಂ ಟ್ರಸ್ಟ್‌‌ನೊಂದಿಗೆ ಒಪ್ಪಂದ ಮಾಡಿಕೊಂಡು ತುರ್ತು ಅಗತ್ಯವಿರುವ ಕೆಲವೆಡೆ ಕಾಲು ಸಂಕ ನಿರ್ಮಾಣ ಮಾಡುತ್ತಿದ್ದೇವೆ.ನವೀನ ಆವಿಷ್ಕಾರದೊಂದಿಗೆ ಕಾಲು ಸಂಕ ನಿರ್ಮಾಣವಾಗುತ್ತಿದೆ. ಅದರ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಖುದ್ದು ಸ್ಥಳಭೇಟಿಯ ಮೂಲಕ ನಡೆಸಲಾಗಿದೆ ಹೇಳಿದರು ಎಂದರು.
ಚಂದ್ರಶೇಖರ ಶೆಟ್ಟಿ,ಪ್ರದೀಪ್ ಶೆಟ್ಟಿ,ಸಂಪತ್ ಪೂಜಾರಿ,ಡಾ. ಅತುಲ್ ಶೆಟ್ಟಿ,ಗೋಪಾಲ್ ಕಾಂಚನ್,ಬಾಲಚಂದ್ರ ಭಟ್, ಪ್ರಣೇಶ್ ಅಡಿಯಾಳ್,ಹರ್ಷ, ರೋಹಿತ್ ಶೆಟ್ಟಿ, ಪ್ರವೀಣ್‌ ಶೆಟ್ಟಿ ಕೊಡ್ಲಾಡಿ, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

ಏನೀದು ನವೀನ ತಂತ್ರಜ್ಞಾನ
ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಖಾಸಗಿಯಾಗಿ ಕಾಲು ಸಂಕ ನಿರ್ಮಿಸಿಕೊಡುತ್ತಿದೆ. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಅದರ ಒಂದು ಭಾಗವಾಗಿ ತುರ್ತು ಅಗತ್ಯತೆಗೆ ಅನುಗುಣವಾಗಿ ಕಾಲು ಸಂಕ ನಿರ್ಮಿಸಲು ಅರುಣಾಚಲಂ ಟ್ರಸ್ಟ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ.ಹಳೆಯ ಲಾರಿ, ಬಸ್ ಇತ್ಯಾದಿ ವಾಹನಗಳ ಚೆಸ್ಸಿ ಸಹಿತ ವಿವಿಧ ಪರಿಕರಗಳನ್ನು ಬಳಸಿ ಕಾಲು ಸಂಕ ನಿರ್ಮಿಸಲಾಗುತ್ತದೆ. ಸುಮಾರು 60ರಿಂದ 72 ಅಡಿಯಷ್ಟು ಉದ್ದದ ಕಾಲುಸಂಕ ನಿರ್ಮಿಸಲಾಗುತ್ತದೆ.ಒಂದು ಕಾಲು ಸಂಕ 36 ಅಡಿ ಬರುತ್ತದೆ. ಎರಡು ಕಾಲು ಸಂಕ ಜೋಡಿಸಿ ಗರಿಷ್ಠ 72 ಅಡಿ ಉದ್ದದ ಕಾಲು ಸಂಕ ನಿರ್ಮಾಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 days ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 days ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago