ಕುಂದಾಪುರ:ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಶಾಸಕ ಗುರುರಾಜ್ ಗಂಟಿಹೊಳೆಯವರು ಭಾನುವಾರ ನಡೆಸಿದರು.
ಕಾಡಂಚಿನ ಪ್ರದೇಶವಾದ ತೊಂಬಟ್ಟು ಕಬ್ಬಿನಾಲೆ ಸಮೀಪ,ಯಡಮೊಗೆ ಕುಂಮ್ಟಿಬೇರುವಿನಲ್ಲಿ ಹಾಗೂ ವಂಡ್ಸೆ ಅಬ್ಬಿಯಲ್ಲಿ ನಿರ್ಮಾಣ ವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು,ಬೈಂದೂರು ಕ್ಷೇತ್ರದ ವಿವಿಧ ಭಾಗದಲ್ಲಿ ಕಾಲು ಸಂಕಗಳ ತುರ್ತು ಅಗತ್ಯವಿದೆ.ಆ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಹಾಗೂ ಅರುಣಾಚಲಂ ಟ್ರಸ್ಟ್ನ ಒಡಂಬಡಿಕೆಯೊಂದಿಗೆ ಕೆಲವು ಕಡೆಗಳಲ್ಲಿ ಕಾಲು ಸಂಕಗಳನ್ನು ವಿನೂತನ ಆವಿಷ್ಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶ ಹೊಂದಿರುವ ಭಾಗದ ಕೂಗ್ರಾಮದಲ್ಲಿ ಕಾಲು ಸಂಕಗಳ ನಿರ್ಮಾಣ ಆಗಬೇಕಿದೆ.ಕಾಲು ಸಂಕಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.
ಅರುಣಾಚಲಂ ಟ್ರಸ್ಟ್ ನಿಂದ ಹಂತ ಹಂತವಾಗಿ ಸುಮಾರು 50 ಕಡೆಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡುವ ಭರವಸೆ ಸಿಕ್ಕಿದೆ.ಮುಂಬರುವ ಮಳೆಗಾಲದೊಳಗೆ ಪ್ರಗತಿಯಲ್ಲಿರುವ ಮೂರು ಕಾಲು ಸಂಕಗಳು ಸಿದ್ಧವಾಗಲಿದೆ.ಕ್ಷೇತ್ರದ ಜನತೆ ಕಾಲು ಸಂಕ ಇಲ್ಲದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಅರುಣಾಚಲಂ ಟ್ರಸ್ಟ್ನೊಂದಿಗೆ ಒಪ್ಪಂದ ಮಾಡಿಕೊಂಡು ತುರ್ತು ಅಗತ್ಯವಿರುವ ಕೆಲವೆಡೆ ಕಾಲು ಸಂಕ ನಿರ್ಮಾಣ ಮಾಡುತ್ತಿದ್ದೇವೆ.ನವೀನ ಆವಿಷ್ಕಾರದೊಂದಿಗೆ ಕಾಲು ಸಂಕ ನಿರ್ಮಾಣವಾಗುತ್ತಿದೆ. ಅದರ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಖುದ್ದು ಸ್ಥಳಭೇಟಿಯ ಮೂಲಕ ನಡೆಸಲಾಗಿದೆ ಹೇಳಿದರು ಎಂದರು.
ಚಂದ್ರಶೇಖರ ಶೆಟ್ಟಿ,ಪ್ರದೀಪ್ ಶೆಟ್ಟಿ,ಸಂಪತ್ ಪೂಜಾರಿ,ಡಾ. ಅತುಲ್ ಶೆಟ್ಟಿ,ಗೋಪಾಲ್ ಕಾಂಚನ್,ಬಾಲಚಂದ್ರ ಭಟ್, ಪ್ರಣೇಶ್ ಅಡಿಯಾಳ್,ಹರ್ಷ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.
ಏನೀದು ನವೀನ ತಂತ್ರಜ್ಞಾನ
ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಖಾಸಗಿಯಾಗಿ ಕಾಲು ಸಂಕ ನಿರ್ಮಿಸಿಕೊಡುತ್ತಿದೆ. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಅದರ ಒಂದು ಭಾಗವಾಗಿ ತುರ್ತು ಅಗತ್ಯತೆಗೆ ಅನುಗುಣವಾಗಿ ಕಾಲು ಸಂಕ ನಿರ್ಮಿಸಲು ಅರುಣಾಚಲಂ ಟ್ರಸ್ಟ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ.ಹಳೆಯ ಲಾರಿ, ಬಸ್ ಇತ್ಯಾದಿ ವಾಹನಗಳ ಚೆಸ್ಸಿ ಸಹಿತ ವಿವಿಧ ಪರಿಕರಗಳನ್ನು ಬಳಸಿ ಕಾಲು ಸಂಕ ನಿರ್ಮಿಸಲಾಗುತ್ತದೆ. ಸುಮಾರು 60ರಿಂದ 72 ಅಡಿಯಷ್ಟು ಉದ್ದದ ಕಾಲುಸಂಕ ನಿರ್ಮಿಸಲಾಗುತ್ತದೆ.ಒಂದು ಕಾಲು ಸಂಕ 36 ಅಡಿ ಬರುತ್ತದೆ. ಎರಡು ಕಾಲು ಸಂಕ ಜೋಡಿಸಿ ಗರಿಷ್ಠ 72 ಅಡಿ ಉದ್ದದ ಕಾಲು ಸಂಕ ನಿರ್ಮಾಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…