ಕುಂದಾಪುರ

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾಲು ಸಂಕ ಪರಿಶೀಲನೆ

Share

Advertisement
Advertisement

ಕುಂದಾಪುರ:ಸಮೃದ್ಧ ಬೈಂದೂರು ಟ್ರಸ್ಟ್‌ ಹಾಗೂ ಅರುಣಾಚಲಂ ಟ್ರಸ್ಟ್‌ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಶಾಸಕ ಗುರುರಾಜ್ ಗಂಟಿಹೊಳೆಯವರು ಭಾನುವಾರ ನಡೆಸಿದರು.
ಕಾಡಂಚಿನ ಪ್ರದೇಶವಾದ ತೊಂಬಟ್ಟು ಕಬ್ಬಿನಾಲೆ ಸಮೀಪ,ಯಡಮೊಗೆ ಕುಂಮ್ಟಿಬೇರುವಿನಲ್ಲಿ ಹಾಗೂ ವಂಡ್ಸೆ ಅಬ್ಬಿಯಲ್ಲಿ ನಿರ್ಮಾಣ ವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು,ಬೈಂದೂರು ಕ್ಷೇತ್ರದ ವಿವಿಧ ಭಾಗದಲ್ಲಿ ಕಾಲು ಸಂಕಗಳ ತುರ್ತು ಅಗತ್ಯವಿದೆ.ಆ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಹಾಗೂ ಅರುಣಾಚಲಂ ಟ್ರಸ್ಟ್‌‌ನ ಒಡಂಬಡಿಕೆಯೊಂದಿಗೆ ಕೆಲವು ಕಡೆಗಳಲ್ಲಿ ಕಾಲು ಸಂಕಗಳನ್ನು ವಿನೂತನ ಆವಿಷ್ಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶ ಹೊಂದಿರುವ ಭಾಗದ ಕೂಗ್ರಾಮದಲ್ಲಿ ಕಾಲು ಸಂಕಗಳ ನಿರ್ಮಾಣ ಆಗಬೇಕಿದೆ.ಕಾಲು ಸಂಕಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.
ಅರುಣಾಚಲಂ ಟ್ರಸ್ಟ್ ನಿಂದ ಹಂತ ಹಂತವಾಗಿ ಸುಮಾರು 50 ಕಡೆಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡುವ ಭರವಸೆ ಸಿಕ್ಕಿದೆ.ಮುಂಬರುವ ಮಳೆಗಾಲದೊಳಗೆ ಪ್ರಗತಿಯಲ್ಲಿರುವ ಮೂರು ಕಾಲು ಸಂಕಗಳು ಸಿದ್ಧವಾಗಲಿದೆ.ಕ್ಷೇತ್ರದ ಜನತೆ ಕಾಲು ಸಂಕ ಇಲ್ಲದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಅರುಣಾಚಲಂ ಟ್ರಸ್ಟ್‌‌ನೊಂದಿಗೆ ಒಪ್ಪಂದ ಮಾಡಿಕೊಂಡು ತುರ್ತು ಅಗತ್ಯವಿರುವ ಕೆಲವೆಡೆ ಕಾಲು ಸಂಕ ನಿರ್ಮಾಣ ಮಾಡುತ್ತಿದ್ದೇವೆ.ನವೀನ ಆವಿಷ್ಕಾರದೊಂದಿಗೆ ಕಾಲು ಸಂಕ ನಿರ್ಮಾಣವಾಗುತ್ತಿದೆ. ಅದರ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಖುದ್ದು ಸ್ಥಳಭೇಟಿಯ ಮೂಲಕ ನಡೆಸಲಾಗಿದೆ ಹೇಳಿದರು ಎಂದರು.
ಚಂದ್ರಶೇಖರ ಶೆಟ್ಟಿ,ಪ್ರದೀಪ್ ಶೆಟ್ಟಿ,ಸಂಪತ್ ಪೂಜಾರಿ,ಡಾ. ಅತುಲ್ ಶೆಟ್ಟಿ,ಗೋಪಾಲ್ ಕಾಂಚನ್,ಬಾಲಚಂದ್ರ ಭಟ್, ಪ್ರಣೇಶ್ ಅಡಿಯಾಳ್,ಹರ್ಷ, ರೋಹಿತ್ ಶೆಟ್ಟಿ, ಪ್ರವೀಣ್‌ ಶೆಟ್ಟಿ ಕೊಡ್ಲಾಡಿ, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

Advertisement

ಏನೀದು ನವೀನ ತಂತ್ರಜ್ಞಾನ
ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಖಾಸಗಿಯಾಗಿ ಕಾಲು ಸಂಕ ನಿರ್ಮಿಸಿಕೊಡುತ್ತಿದೆ. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಅದರ ಒಂದು ಭಾಗವಾಗಿ ತುರ್ತು ಅಗತ್ಯತೆಗೆ ಅನುಗುಣವಾಗಿ ಕಾಲು ಸಂಕ ನಿರ್ಮಿಸಲು ಅರುಣಾಚಲಂ ಟ್ರಸ್ಟ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ.ಹಳೆಯ ಲಾರಿ, ಬಸ್ ಇತ್ಯಾದಿ ವಾಹನಗಳ ಚೆಸ್ಸಿ ಸಹಿತ ವಿವಿಧ ಪರಿಕರಗಳನ್ನು ಬಳಸಿ ಕಾಲು ಸಂಕ ನಿರ್ಮಿಸಲಾಗುತ್ತದೆ. ಸುಮಾರು 60ರಿಂದ 72 ಅಡಿಯಷ್ಟು ಉದ್ದದ ಕಾಲುಸಂಕ ನಿರ್ಮಿಸಲಾಗುತ್ತದೆ.ಒಂದು ಕಾಲು ಸಂಕ 36 ಅಡಿ ಬರುತ್ತದೆ. ಎರಡು ಕಾಲು ಸಂಕ ಜೋಡಿಸಿ ಗರಿಷ್ಠ 72 ಅಡಿ ಉದ್ದದ ಕಾಲು ಸಂಕ ನಿರ್ಮಾಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago