ಕುಂದಾಪುರ

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾಲು ಸಂಕ ಪರಿಶೀಲನೆ

Share

ಕುಂದಾಪುರ:ಸಮೃದ್ಧ ಬೈಂದೂರು ಟ್ರಸ್ಟ್‌ ಹಾಗೂ ಅರುಣಾಚಲಂ ಟ್ರಸ್ಟ್‌ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಶಾಸಕ ಗುರುರಾಜ್ ಗಂಟಿಹೊಳೆಯವರು ಭಾನುವಾರ ನಡೆಸಿದರು.
ಕಾಡಂಚಿನ ಪ್ರದೇಶವಾದ ತೊಂಬಟ್ಟು ಕಬ್ಬಿನಾಲೆ ಸಮೀಪ,ಯಡಮೊಗೆ ಕುಂಮ್ಟಿಬೇರುವಿನಲ್ಲಿ ಹಾಗೂ ವಂಡ್ಸೆ ಅಬ್ಬಿಯಲ್ಲಿ ನಿರ್ಮಾಣ ವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು,ಬೈಂದೂರು ಕ್ಷೇತ್ರದ ವಿವಿಧ ಭಾಗದಲ್ಲಿ ಕಾಲು ಸಂಕಗಳ ತುರ್ತು ಅಗತ್ಯವಿದೆ.ಆ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಹಾಗೂ ಅರುಣಾಚಲಂ ಟ್ರಸ್ಟ್‌‌ನ ಒಡಂಬಡಿಕೆಯೊಂದಿಗೆ ಕೆಲವು ಕಡೆಗಳಲ್ಲಿ ಕಾಲು ಸಂಕಗಳನ್ನು ವಿನೂತನ ಆವಿಷ್ಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶ ಹೊಂದಿರುವ ಭಾಗದ ಕೂಗ್ರಾಮದಲ್ಲಿ ಕಾಲು ಸಂಕಗಳ ನಿರ್ಮಾಣ ಆಗಬೇಕಿದೆ.ಕಾಲು ಸಂಕಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.
ಅರುಣಾಚಲಂ ಟ್ರಸ್ಟ್ ನಿಂದ ಹಂತ ಹಂತವಾಗಿ ಸುಮಾರು 50 ಕಡೆಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡುವ ಭರವಸೆ ಸಿಕ್ಕಿದೆ.ಮುಂಬರುವ ಮಳೆಗಾಲದೊಳಗೆ ಪ್ರಗತಿಯಲ್ಲಿರುವ ಮೂರು ಕಾಲು ಸಂಕಗಳು ಸಿದ್ಧವಾಗಲಿದೆ.ಕ್ಷೇತ್ರದ ಜನತೆ ಕಾಲು ಸಂಕ ಇಲ್ಲದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಅರುಣಾಚಲಂ ಟ್ರಸ್ಟ್‌‌ನೊಂದಿಗೆ ಒಪ್ಪಂದ ಮಾಡಿಕೊಂಡು ತುರ್ತು ಅಗತ್ಯವಿರುವ ಕೆಲವೆಡೆ ಕಾಲು ಸಂಕ ನಿರ್ಮಾಣ ಮಾಡುತ್ತಿದ್ದೇವೆ.ನವೀನ ಆವಿಷ್ಕಾರದೊಂದಿಗೆ ಕಾಲು ಸಂಕ ನಿರ್ಮಾಣವಾಗುತ್ತಿದೆ. ಅದರ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಖುದ್ದು ಸ್ಥಳಭೇಟಿಯ ಮೂಲಕ ನಡೆಸಲಾಗಿದೆ ಹೇಳಿದರು ಎಂದರು.
ಚಂದ್ರಶೇಖರ ಶೆಟ್ಟಿ,ಪ್ರದೀಪ್ ಶೆಟ್ಟಿ,ಸಂಪತ್ ಪೂಜಾರಿ,ಡಾ. ಅತುಲ್ ಶೆಟ್ಟಿ,ಗೋಪಾಲ್ ಕಾಂಚನ್,ಬಾಲಚಂದ್ರ ಭಟ್, ಪ್ರಣೇಶ್ ಅಡಿಯಾಳ್,ಹರ್ಷ, ರೋಹಿತ್ ಶೆಟ್ಟಿ, ಪ್ರವೀಣ್‌ ಶೆಟ್ಟಿ ಕೊಡ್ಲಾಡಿ, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

ಏನೀದು ನವೀನ ತಂತ್ರಜ್ಞಾನ
ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಖಾಸಗಿಯಾಗಿ ಕಾಲು ಸಂಕ ನಿರ್ಮಿಸಿಕೊಡುತ್ತಿದೆ. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಅದರ ಒಂದು ಭಾಗವಾಗಿ ತುರ್ತು ಅಗತ್ಯತೆಗೆ ಅನುಗುಣವಾಗಿ ಕಾಲು ಸಂಕ ನಿರ್ಮಿಸಲು ಅರುಣಾಚಲಂ ಟ್ರಸ್ಟ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ.ಹಳೆಯ ಲಾರಿ, ಬಸ್ ಇತ್ಯಾದಿ ವಾಹನಗಳ ಚೆಸ್ಸಿ ಸಹಿತ ವಿವಿಧ ಪರಿಕರಗಳನ್ನು ಬಳಸಿ ಕಾಲು ಸಂಕ ನಿರ್ಮಿಸಲಾಗುತ್ತದೆ. ಸುಮಾರು 60ರಿಂದ 72 ಅಡಿಯಷ್ಟು ಉದ್ದದ ಕಾಲುಸಂಕ ನಿರ್ಮಿಸಲಾಗುತ್ತದೆ.ಒಂದು ಕಾಲು ಸಂಕ 36 ಅಡಿ ಬರುತ್ತದೆ. ಎರಡು ಕಾಲು ಸಂಕ ಜೋಡಿಸಿ ಗರಿಷ್ಠ 72 ಅಡಿ ಉದ್ದದ ಕಾಲು ಸಂಕ ನಿರ್ಮಾಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago