ಕುಂದಾಪುರ:ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ,ಕುಂದೇಶ್ವರ ದೇವಸ್ಥಾನ ಕುಂದಾಪುರ ಮತ್ತು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅವರ ಸಹಭಾಗಿತ್ವದಲ್ಲಿ ಶಂಕರ ಜಯಂತಿ ಕಾರ್ಯಕ್ರಮ ಕುಂದೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ವಿದ್ವಾನ್ ಮಾಧವ ಮಂಜರು ಉಳ್ಳೂರು ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಮೂರ್ತಿ ಲೋಕೇಶ್ ಅಡಿಗ ಪ್ರಾಂತೀಯ ಧರ್ಮ ಅಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ ಮತ್ತು ನಾಗ ಪಾತ್ರಿಗಳು ನಾವುಂದ ಬಡಾಕೆರೆ ಉಪಸ್ಥಿತರಿದ್ದರು.
ವೆಂಕಟ್ರಮಣರಾವ್,ಕುಮಾರಿ ಸನ್ನಿಧಿ ಅಡಿಗ ಬಡಾಕೆರೆ ಮತ್ತು ಕುಮಾರಿ ಸಾನಿಧ್ಯ ಮೈಯ ಉಪ್ಪುಂದ ಅವರು ಶಂಕರಾಚಾರ್ಯರ ಬಗ್ಗೆ ವಿವರಿಸಿದರು.ವಿದ್ವಾನ್ ಮಾಧವ ಅಡಿಗ ಉಳ್ಳೂರು ಆವರು ಶಂಕರಾಚಾರ್ಯರ ಬಗ್ಗೆ ಹಾಗೂ ಆತ್ಮ ಪರಮಾತ್ಮ ಮತ್ತು ಬ್ರಹ್ಮ ಸತ್ಯ ಜಗನ್ಮಿತ್ಯ ವಿಷಯಗಳ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.
ವೇದ ಮೂರ್ತಿ ವಿಘ್ನೇಶ
ಮಂಜರು ಪೂಜೆಯನ್ನು ನೆರವೇರಿಸಿದರು.
ವಿದ್ವಾನ್ ಮಹೇಶ್ ಹೆಗಡೆ ದಾಂಡೇಲಿ ನಿರೂಪಿಸಿದರು.
ಲಕ್ಷ್ಮೀಶ ಅಡಿಗ ಸ್ವಾಗತಿಸಿದರು. ನಾಗೇಂದ್ರ ಅಡಿಗ ವಂದಿಸಿದರು.ಶ್ರುತಿಲಯ ಸಂಗೀತ ಶಾಲೆಯ ವಿದುಷಿ ನಳಿನಿರಾವ್ ಮತ್ತು ಸಂಗಡಿಗರಿಂದ ಹಾಗೂ ಬಡಾಕೆರೆ ಶ್ರೀ ಶಾರದಾ ಸದ್ವಿದ್ಯಾ ಕುಮಾರಿ ಶಿಬಿರದ ವಿದ್ಯಾರ್ಥಿನಿಯವರಿಂದ ಶಂಕರಾಚಾರ್ಯರ ಕೃತಿ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…