ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನಸ್ತೋಮ
ಮಂಗಳೂರು:ಸರಣಿ ರಜೆ ಹಿನ್ನಲೆಯಲ್ಲಿ ರಾಜ್ಯದ ಪ್ರಮುಖ ಯಾತ್ರಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತ ಸಮೂಹವೆ ಭಾನುವಾರ ಕಂಡು ಬಂದಿದೆ.
ಶುಕ್ರವಾರ,ಶನಿವಾರ ಹಾಗೂ ಭಾನುವಾರ ಸರಣಿಯಾಗಿ ಸರಕಾರಿ ರಜೆಗಳಿದ್ದ ಹಿನ್ನಲೆಯಲ್ಲಿ ಮೂರು ದಿನಗಳಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿದ್ದರು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿ,ಹೊರಾಂಗಣ, ಪೇಟೆಯಲ್ಲಿ ಭಕ್ತರ ದಟ್ಟಣೆ ಹೆಚ್ಚಿತ್ತು ಹಾಗೂ ಪೇಟೆಯಲ್ಲಿ ವಾಹನ ಓಡಾಟವೂ ಅಧಿಕವಾಗಿತ್ತು.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು ಶ್ರೀ ದೇವರ ದರುಶನಕ್ಕೆ ಹಾಗೂ ಅನ್ನ ಪ್ರಸಾದ ಸ್ವೀಕರಿಸಲು ಯಾವುದೇ ರೀತಿಯ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಯಿತು.ದೇವಸ್ಥಾನದ ಸಿಬ್ಬಂದಿಗಳು ಭಕ್ತರಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಹಕರಿಸಿದರು.