ಕುಂದಾಪುರ

ದೋಣಿ ರಿಂಗ್ ಕಳವು ಆರೋಪಿ ಬಂಧನ,ಸ್ವತ್ತು ವಶಕ್ಕೆ

Share

ಕುಂದಾಪುರ:ಬೈಂದೂರು ಪೊಲೀಸ್ ಠಾಣಾ ಸರಹದ್ದಿನ ಉಪ್ಪುಂದ ಗ್ರಾಮದ ಕರ್ಕಿಕಳಿ ಎಡಮಾವಿನ ಹೊಳೆ ಸಮೀಪದ ದಡದಲ್ಲಿ ಎ.ಶ್ರೀನಿವಾಸ ಖಾರ್ವಿ ಎಂಬುವವರು ನಿಲ್ಲಿಸಿದ್ದ ಶ್ರೀ ಹಕ್ರೆಮಠ ಯಕ್ಷೇಶ್ವರಿ ಪ್ರಸಾದ ರಾಣಿ ಬಲೆ ದೋಣಿಯ ರೋಪನ್ನು ತುಂಡರಿಸಿ 95 ಹಿತ್ತಾಳೆಯ ರಿಂಗ್‍ಗಳನ್ನು ಕಳವು ಗೈದ ಆರೋಪಿಯನ್ನು ಸ್ವತ್ತು ಸಹಿತ ಬಂಧಿಸಲಾಗಿದೆ.
ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ನಿವಾಸಿ ಆರೋಪಿತ ಮಹೇಶ್ ಖಾರ್ವಿ (30 ವರ್ಷ) ಅವರನ್ನು ವಶಕ್ಕೆ ಪಡೆದು ಕೊಂಡಿದ್ದ ಪೊಲೀಸರು 1,00,000 ರೂ ಮೌಲ್ಯದ 95 ಹಿತ್ತಾಳೆ ರಿಂಗ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಡಾ.ಹರ್ಷ ಪ್ರಿಯಂವದಾ ಪ್ರೊಬೇಷನರಿ ಐಪಿಎಸ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಆರೋಪಿ ಪತ್ತೆಗೆ ಬಲೆಯನ್ನು ಬಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಉಡುಪಿ ಜಿಲ್ಲೆ ಅವರ ನಿರ್ದೇಶನದಲ್ಲಿ,ಬೆಳ್ಳಿಯಪ್ಪ ಕೆ.ಯು ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಹಾಗೂ ಸವಿತ್ರ ತೇಜ್ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ಅವರ ಮಾರ್ಗದರ್ಶನದಲ್ಲಿ ಡಾ.ಹರ್ಷ ಪ್ರಿಯಂವದಾ ಪ್ರೋಬೇಷನರಿ ಐಪಿಎಸ್,ತಿಮ್ಮೇಶ್ ಬಿ.ಎನ್ ಪಿ.ಎಸ್.ಐ. (ಕಾ.ಸು ) ಹಾಗೂ ಮಹೇಶ ಕಂಬಿ ಪಿ.ಎಸ್.ಐ,ಸೂರ ನಾಯ್ಕ ಎಎಸ್ ಐ,ಎಂಹೆಚ್ ಸಿ ನಾಗಶ್ರೀ,ಅಪರಾಧ ವಿಭಾಗದ ಸಿಬ್ಬಂದಿಯವರಾದ,ಸುಜಿತ್ ಕುಮಾರ್,ಮಾಳಪ್ಪ ದೇಸಾಯಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ ಕೆ ಐ.ಪಿ.ಎಸ್ ಅವರು ತಂಡವನ್ನು ಅಭಿನಂದಿದ್ದಾರೆ.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

1 month ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago