ಕುಂದಾಪುರ

ದೋಣಿ ರಿಂಗ್ ಕಳವು ಆರೋಪಿ ಬಂಧನ,ಸ್ವತ್ತು ವಶಕ್ಕೆ

Share

ಕುಂದಾಪುರ:ಬೈಂದೂರು ಪೊಲೀಸ್ ಠಾಣಾ ಸರಹದ್ದಿನ ಉಪ್ಪುಂದ ಗ್ರಾಮದ ಕರ್ಕಿಕಳಿ ಎಡಮಾವಿನ ಹೊಳೆ ಸಮೀಪದ ದಡದಲ್ಲಿ ಎ.ಶ್ರೀನಿವಾಸ ಖಾರ್ವಿ ಎಂಬುವವರು ನಿಲ್ಲಿಸಿದ್ದ ಶ್ರೀ ಹಕ್ರೆಮಠ ಯಕ್ಷೇಶ್ವರಿ ಪ್ರಸಾದ ರಾಣಿ ಬಲೆ ದೋಣಿಯ ರೋಪನ್ನು ತುಂಡರಿಸಿ 95 ಹಿತ್ತಾಳೆಯ ರಿಂಗ್‍ಗಳನ್ನು ಕಳವು ಗೈದ ಆರೋಪಿಯನ್ನು ಸ್ವತ್ತು ಸಹಿತ ಬಂಧಿಸಲಾಗಿದೆ.
ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ನಿವಾಸಿ ಆರೋಪಿತ ಮಹೇಶ್ ಖಾರ್ವಿ (30 ವರ್ಷ) ಅವರನ್ನು ವಶಕ್ಕೆ ಪಡೆದು ಕೊಂಡಿದ್ದ ಪೊಲೀಸರು 1,00,000 ರೂ ಮೌಲ್ಯದ 95 ಹಿತ್ತಾಳೆ ರಿಂಗ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಡಾ.ಹರ್ಷ ಪ್ರಿಯಂವದಾ ಪ್ರೊಬೇಷನರಿ ಐಪಿಎಸ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಆರೋಪಿ ಪತ್ತೆಗೆ ಬಲೆಯನ್ನು ಬಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಉಡುಪಿ ಜಿಲ್ಲೆ ಅವರ ನಿರ್ದೇಶನದಲ್ಲಿ,ಬೆಳ್ಳಿಯಪ್ಪ ಕೆ.ಯು ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಹಾಗೂ ಸವಿತ್ರ ತೇಜ್ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ಅವರ ಮಾರ್ಗದರ್ಶನದಲ್ಲಿ ಡಾ.ಹರ್ಷ ಪ್ರಿಯಂವದಾ ಪ್ರೋಬೇಷನರಿ ಐಪಿಎಸ್,ತಿಮ್ಮೇಶ್ ಬಿ.ಎನ್ ಪಿ.ಎಸ್.ಐ. (ಕಾ.ಸು ) ಹಾಗೂ ಮಹೇಶ ಕಂಬಿ ಪಿ.ಎಸ್.ಐ,ಸೂರ ನಾಯ್ಕ ಎಎಸ್ ಐ,ಎಂಹೆಚ್ ಸಿ ನಾಗಶ್ರೀ,ಅಪರಾಧ ವಿಭಾಗದ ಸಿಬ್ಬಂದಿಯವರಾದ,ಸುಜಿತ್ ಕುಮಾರ್,ಮಾಳಪ್ಪ ದೇಸಾಯಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ ಕೆ ಐ.ಪಿ.ಎಸ್ ಅವರು ತಂಡವನ್ನು ಅಭಿನಂದಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago