ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಕ್ರೀಡಾ ವಾರ್ಷಿಕೋತ್ಸವ 2023-24 ಉದ್ಘಾಟನೆ

Share

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಕ್ರೀಡಾ ವಾರ್ಷಿಕೋತ್ಸವ 23-2024 ಕಾರ್ಯಕ್ರಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ನಡೆಯಿತು.
ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಪ್ರಿನ್ಸಿಪಾಲ್ ಸಂತೋಷ್ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ವಿದ್ಯೆ ಎಂಬುವುದು ಅಮೂಲ್ಯವಾದ ಸಂಪತ್ತು ಆಗಿದೆ.ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ಪಡೆದುಕೊಂಡು ಜ್ಞಾನವನ್ನು ಉತ್ತಮವಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಮಮತಾ ವಿದ್ಯಾರ್ಥಿಗಳನ್ನು ಕುರಿತು ಹಿತನುಡಿಗಳನ್ನು ಆಡಿದರು.ಉಪಪ್ರಾಂಶುಪಾಲೆಸುಜಾತ ಹಾಗೂ ಕ್ರೀಡಾ ಸಂಯೋಜಕರಾದ ನಿತಿನ್ ಶೆಣೈ ಮತ್ತು ಮನೋಜ್ ಕುಮಾರ್ , ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಉಪನ್ಯಾಸಕಿ ಅನುಪಮ ಭಟ್ ವಂದಿಸಿದರು,ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ,ಮಾನಸಿಕ ಶಾಂತಿ,ವೃದ್ಧಿಯಾಗುವುದು ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ವಾರ್ಷಿಕ ಕ್ರೀಡೋತ್ಸವ ಆಯೋಜನೆ ಮಾಡಿದೆ.

Advertisement

Share

Leave a comment

Your email address will not be published. Required fields are marked *

You cannot copy content of this page