ಕುಂದಾಪುರ

ಎಂಟು ವರ್ಷದ ಬಳಿಕ ತವರಿಗೆ ಮರಳಿದ ಜಿಂಕು

Share

Advertisement
Advertisement
Advertisement

ಉಡುಪಿ:ಕಳೆದ ನಾಲ್ಕು ತಿಂಗಳ ಹಿಂದೆ ಕುಂದಾಪುರ ತಾಲೂಕಿನ ತ್ರಾಸಿ,ಮುಳ್ಳಿಕಟ್ಟೆ ಪರಿಸರದಲ್ಲಿ ಅಡ್ಡಾಡುತ್ತಿದ್ದ ಉತ್ತರ ಪ್ರದೇಶದ ಮೆಹದಾವಲ್ ಜಿಲ್ಲೆ ನಿವಾಸಿ ಮಾನಸಿಕ ಅಸ್ವಸ್ಥ ಜಿಂಕು (ಸುನಿಲ್) ಎಂಬಾತ ಯುವಕ ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖ ಗೊಂಡು ಎಂಟು ವರ್ಷದ ಬಳಿಕ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ.
ಘಟನೆ ವಿವರ:ಜನವರಿ.25 ರಂದು ತ್ರಾಸಿ ಬೀಚ್ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಕೈಯಲ್ಲಿ ಒಂದು ಚೀಲ ಹಿಡಿದುಕೊಂಡು ಹರಿದ ಬಟ್ಟೆ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬನು ನಡೆದು ಕೊಂಡು ಬರುತ್ತಿರುವುದನ್ನು ಸಮಾಜ ಸೇವಕ ಎಮ್.ಎಚ್ ಇಬ್ರಾಹಿಂ ಗಂಗೊಳ್ಳಿ ಗಮನಿಸಿದ್ದಾರೆ.ಸಂಜೆ ಅದೆ ವ್ಯಕ್ತಿ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿತ್ರಣಗೊಂಡು ಕುಳಿತಿರುದನ್ನು ಮತ್ತೆ ಗಮನಿಸಿದಾಗ ಯುವಕನನ್ನು ವಿಚಾರಿಸಲಾಗಿದೆ.ಹಿಂದಿಯಲ್ಲಿ ಅಸ್ಪಷ್ಟವಾಗಿ ಮಾತನಾಡುತ್ತಿದ್ದ ಆತನು ತನ್ನ ಹೆಸರು ಸುನಿಲ್ ಎಂದು ಗುರುತಿಸಿಕೊಂಡಿದ್ದಾನೆ.ಯುವಕನಿಗೆ ಪುನರ್ ಜೀವನ ಕಟ್ಟಿಕೊಡುವ ಉದ್ದೇಶದಿಂದ ಸ್ನೇಹಾಲಯ ಸಂಸ್ಥಾಪಕರಾದ ಜೋಸೆಫ್ ಕ್ರಾಸ್ತಾರವರ ಮಾರ್ಗದರ್ಶನದೊಂದಿಗೆ ಗಂಗೊಳ್ಳಿ ಪೆÇಲೀಸ್ ಠಾಣೆ ಸಹಕಾರವನ್ನು ಪಡೆದುಕೊಂಡ ಇಬ್ರಾಹಿಂ ಗಂಗೊಳ್ಳಿ ಅವರು ತನ್ನ ಸ್ನೇಹಿತರ ಜತೆಗೂಡಿ ತಮ್ಮ ಆಂಬ್ಯುಲೆನ್ಸ್‍ನಲ್ಲಿ ಯುವಕನನ್ನು ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಕೇಂದ್ರಕ್ಕೆ ದಾಖಲು ಮಾಡಿದ್ದರು.ನಾಲ್ಕು ತಿಂಗಳ ಆರೈಕೆ ಬಳಿಕ ಜಿಂಕು (ಸುನಿಲ್) ಸಂಪೂರ್ಣವಾಗಿ ಮಾನಸಿಕ ರೋಗದಿಂದ ಗುಣಮುಖಗೊಂಡು ಸಹಜ ಜೀವನಕ್ಕೆ ಮರಳಿದ್ದರು.ಮುಂಬೈ ಶೃದ್ಧಾ ಕೇಂದ್ರದ ಸಿಬ್ಬಂದಿಗಳ ಕಠಿಣ ಪರಿಶ್ರಮದಿಂದ ಆತನ ವಿಳಾಸವನ್ನು ಪತ್ತೆ ಹಚ್ಚಿ ಮೇ.13 ರಂದು ಹೆತ್ತವರ ಮಡಿಲಿಗೆ ಸೇರಿಸಲಾಗಿದೆ.
ಪ್ರೇಮ ವೈಪಲ್ಯವೆ ಮಾನಸಿಕತೆಗೆ ಕಾರಣ:ಉತ್ತರ ಪ್ರದೇಶ ಮೆಹದಾವಲ್ ಜಿಲ್ಲೆ ಬಡ ಕುಟುಂಬದ ನಿವಾಸಿ ಜಿಂಕು ತನ್ನ ಹುಟ್ಟೂರಲ್ಲಿ ಸೈಕಲ್ ಮ್ಯಾಕಾನಿಕ್ ಕೆಲಸವನ್ನು ಮಾಡಿಕೊಂಡಿದ್ದಾನು.ಪ್ರೇಮ ವೈಪಲ್ಯದಿಂದ ಮಾನಸಿಕಗೊಂಡ ಆತನು ಅಲ್ಲಿಂದ ನಾಪತ್ತೆಯಾಗಿದ್ದಾನೆ.ಎಷ್ಟೆ ಹುಡುಕಾಟ ನಡೆಸಿದ್ದರು ಮಗನು ಪತ್ತೆಯಾಗದೆ ಇರುವುದರಿಂದ ಹೆತ್ತವರು ಬಹಳಷ್ಟು ನೊಂದುಕೊಂಡಿದ್ದರು.ಸತತ ಎಂಟು ವರ್ಷದ ಬಳಿಕ ಜಿಂಕು ಮರಳಿ ತನ್ನ ಕುಟುಂಬಿಕರನ್ನು ಮತ್ತೆ ಸೇರಿಕೊಂಡಿರುವುದರಿಂದ ಹೆತ್ತವರ ಮೊಗದಲ್ಲಿ ಮಂದಹಾಸ ಮೂಡಿದೆ.ಒಂದು ಪ್ರೇಮ ಕಥೆ ಜಿಂಕವನ್ನು ಮಾನಸಿಕ ರೋಗಕ್ಕೆ ಬಲಿಯಾಗುವಂತೆ ಮಾಡಿರುವುದು ಮಾತ್ರವಲ್ಲದೆ ಎಂಟು ವರ್ಷಗಳಿಂದ ಊರೂರು ಸುತ್ತುವಂತೆ ಮಾಡಿದೆ.

Advertisement
Advertisement
Advertisement

Share
Team Kundapur Times

Recent Posts

ಓರಿಯೆಂಟೆಷನ್ ಕಾರ್ಯಕ್ರಮ ಉದ್ಘಾಟನೆ:ಓದಿನಲ್ಲಿ ನಿರಂತರತೆ ಕಾಪಾಡಿಕೊಳ್ಳುವುದು ಮುಖ್ಯ-ಸಂಸ್ಥಾಪಕ ಸುಬ್ರಹ್ಮಣ್ಯ

ಕುಂದಾಪುರ:ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೆಷನ್ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು…

3 hours ago

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

6 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

6 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

6 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago