ಕುಂದಾಪುರ

ಎಂಟು ವರ್ಷದ ಬಳಿಕ ತವರಿಗೆ ಮರಳಿದ ಜಿಂಕು

Share

ಉಡುಪಿ:ಕಳೆದ ನಾಲ್ಕು ತಿಂಗಳ ಹಿಂದೆ ಕುಂದಾಪುರ ತಾಲೂಕಿನ ತ್ರಾಸಿ,ಮುಳ್ಳಿಕಟ್ಟೆ ಪರಿಸರದಲ್ಲಿ ಅಡ್ಡಾಡುತ್ತಿದ್ದ ಉತ್ತರ ಪ್ರದೇಶದ ಮೆಹದಾವಲ್ ಜಿಲ್ಲೆ ನಿವಾಸಿ ಮಾನಸಿಕ ಅಸ್ವಸ್ಥ ಜಿಂಕು (ಸುನಿಲ್) ಎಂಬಾತ ಯುವಕ ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖ ಗೊಂಡು ಎಂಟು ವರ್ಷದ ಬಳಿಕ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ.
ಘಟನೆ ವಿವರ:ಜನವರಿ.25 ರಂದು ತ್ರಾಸಿ ಬೀಚ್ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಕೈಯಲ್ಲಿ ಒಂದು ಚೀಲ ಹಿಡಿದುಕೊಂಡು ಹರಿದ ಬಟ್ಟೆ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬನು ನಡೆದು ಕೊಂಡು ಬರುತ್ತಿರುವುದನ್ನು ಸಮಾಜ ಸೇವಕ ಎಮ್.ಎಚ್ ಇಬ್ರಾಹಿಂ ಗಂಗೊಳ್ಳಿ ಗಮನಿಸಿದ್ದಾರೆ.ಸಂಜೆ ಅದೆ ವ್ಯಕ್ತಿ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿತ್ರಣಗೊಂಡು ಕುಳಿತಿರುದನ್ನು ಮತ್ತೆ ಗಮನಿಸಿದಾಗ ಯುವಕನನ್ನು ವಿಚಾರಿಸಲಾಗಿದೆ.ಹಿಂದಿಯಲ್ಲಿ ಅಸ್ಪಷ್ಟವಾಗಿ ಮಾತನಾಡುತ್ತಿದ್ದ ಆತನು ತನ್ನ ಹೆಸರು ಸುನಿಲ್ ಎಂದು ಗುರುತಿಸಿಕೊಂಡಿದ್ದಾನೆ.ಯುವಕನಿಗೆ ಪುನರ್ ಜೀವನ ಕಟ್ಟಿಕೊಡುವ ಉದ್ದೇಶದಿಂದ ಸ್ನೇಹಾಲಯ ಸಂಸ್ಥಾಪಕರಾದ ಜೋಸೆಫ್ ಕ್ರಾಸ್ತಾರವರ ಮಾರ್ಗದರ್ಶನದೊಂದಿಗೆ ಗಂಗೊಳ್ಳಿ ಪೆÇಲೀಸ್ ಠಾಣೆ ಸಹಕಾರವನ್ನು ಪಡೆದುಕೊಂಡ ಇಬ್ರಾಹಿಂ ಗಂಗೊಳ್ಳಿ ಅವರು ತನ್ನ ಸ್ನೇಹಿತರ ಜತೆಗೂಡಿ ತಮ್ಮ ಆಂಬ್ಯುಲೆನ್ಸ್‍ನಲ್ಲಿ ಯುವಕನನ್ನು ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಕೇಂದ್ರಕ್ಕೆ ದಾಖಲು ಮಾಡಿದ್ದರು.ನಾಲ್ಕು ತಿಂಗಳ ಆರೈಕೆ ಬಳಿಕ ಜಿಂಕು (ಸುನಿಲ್) ಸಂಪೂರ್ಣವಾಗಿ ಮಾನಸಿಕ ರೋಗದಿಂದ ಗುಣಮುಖಗೊಂಡು ಸಹಜ ಜೀವನಕ್ಕೆ ಮರಳಿದ್ದರು.ಮುಂಬೈ ಶೃದ್ಧಾ ಕೇಂದ್ರದ ಸಿಬ್ಬಂದಿಗಳ ಕಠಿಣ ಪರಿಶ್ರಮದಿಂದ ಆತನ ವಿಳಾಸವನ್ನು ಪತ್ತೆ ಹಚ್ಚಿ ಮೇ.13 ರಂದು ಹೆತ್ತವರ ಮಡಿಲಿಗೆ ಸೇರಿಸಲಾಗಿದೆ.
ಪ್ರೇಮ ವೈಪಲ್ಯವೆ ಮಾನಸಿಕತೆಗೆ ಕಾರಣ:ಉತ್ತರ ಪ್ರದೇಶ ಮೆಹದಾವಲ್ ಜಿಲ್ಲೆ ಬಡ ಕುಟುಂಬದ ನಿವಾಸಿ ಜಿಂಕು ತನ್ನ ಹುಟ್ಟೂರಲ್ಲಿ ಸೈಕಲ್ ಮ್ಯಾಕಾನಿಕ್ ಕೆಲಸವನ್ನು ಮಾಡಿಕೊಂಡಿದ್ದಾನು.ಪ್ರೇಮ ವೈಪಲ್ಯದಿಂದ ಮಾನಸಿಕಗೊಂಡ ಆತನು ಅಲ್ಲಿಂದ ನಾಪತ್ತೆಯಾಗಿದ್ದಾನೆ.ಎಷ್ಟೆ ಹುಡುಕಾಟ ನಡೆಸಿದ್ದರು ಮಗನು ಪತ್ತೆಯಾಗದೆ ಇರುವುದರಿಂದ ಹೆತ್ತವರು ಬಹಳಷ್ಟು ನೊಂದುಕೊಂಡಿದ್ದರು.ಸತತ ಎಂಟು ವರ್ಷದ ಬಳಿಕ ಜಿಂಕು ಮರಳಿ ತನ್ನ ಕುಟುಂಬಿಕರನ್ನು ಮತ್ತೆ ಸೇರಿಕೊಂಡಿರುವುದರಿಂದ ಹೆತ್ತವರ ಮೊಗದಲ್ಲಿ ಮಂದಹಾಸ ಮೂಡಿದೆ.ಒಂದು ಪ್ರೇಮ ಕಥೆ ಜಿಂಕವನ್ನು ಮಾನಸಿಕ ರೋಗಕ್ಕೆ ಬಲಿಯಾಗುವಂತೆ ಮಾಡಿರುವುದು ಮಾತ್ರವಲ್ಲದೆ ಎಂಟು ವರ್ಷಗಳಿಂದ ಊರೂರು ಸುತ್ತುವಂತೆ ಮಾಡಿದೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago