ಕುಂದಾಪುರ

ಎಂಟು ವರ್ಷದ ಬಳಿಕ ತವರಿಗೆ ಮರಳಿದ ಜಿಂಕು

Share

ಉಡುಪಿ:ಕಳೆದ ನಾಲ್ಕು ತಿಂಗಳ ಹಿಂದೆ ಕುಂದಾಪುರ ತಾಲೂಕಿನ ತ್ರಾಸಿ,ಮುಳ್ಳಿಕಟ್ಟೆ ಪರಿಸರದಲ್ಲಿ ಅಡ್ಡಾಡುತ್ತಿದ್ದ ಉತ್ತರ ಪ್ರದೇಶದ ಮೆಹದಾವಲ್ ಜಿಲ್ಲೆ ನಿವಾಸಿ ಮಾನಸಿಕ ಅಸ್ವಸ್ಥ ಜಿಂಕು (ಸುನಿಲ್) ಎಂಬಾತ ಯುವಕ ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖ ಗೊಂಡು ಎಂಟು ವರ್ಷದ ಬಳಿಕ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ.
ಘಟನೆ ವಿವರ:ಜನವರಿ.25 ರಂದು ತ್ರಾಸಿ ಬೀಚ್ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಕೈಯಲ್ಲಿ ಒಂದು ಚೀಲ ಹಿಡಿದುಕೊಂಡು ಹರಿದ ಬಟ್ಟೆ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬನು ನಡೆದು ಕೊಂಡು ಬರುತ್ತಿರುವುದನ್ನು ಸಮಾಜ ಸೇವಕ ಎಮ್.ಎಚ್ ಇಬ್ರಾಹಿಂ ಗಂಗೊಳ್ಳಿ ಗಮನಿಸಿದ್ದಾರೆ.ಸಂಜೆ ಅದೆ ವ್ಯಕ್ತಿ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿತ್ರಣಗೊಂಡು ಕುಳಿತಿರುದನ್ನು ಮತ್ತೆ ಗಮನಿಸಿದಾಗ ಯುವಕನನ್ನು ವಿಚಾರಿಸಲಾಗಿದೆ.ಹಿಂದಿಯಲ್ಲಿ ಅಸ್ಪಷ್ಟವಾಗಿ ಮಾತನಾಡುತ್ತಿದ್ದ ಆತನು ತನ್ನ ಹೆಸರು ಸುನಿಲ್ ಎಂದು ಗುರುತಿಸಿಕೊಂಡಿದ್ದಾನೆ.ಯುವಕನಿಗೆ ಪುನರ್ ಜೀವನ ಕಟ್ಟಿಕೊಡುವ ಉದ್ದೇಶದಿಂದ ಸ್ನೇಹಾಲಯ ಸಂಸ್ಥಾಪಕರಾದ ಜೋಸೆಫ್ ಕ್ರಾಸ್ತಾರವರ ಮಾರ್ಗದರ್ಶನದೊಂದಿಗೆ ಗಂಗೊಳ್ಳಿ ಪೆÇಲೀಸ್ ಠಾಣೆ ಸಹಕಾರವನ್ನು ಪಡೆದುಕೊಂಡ ಇಬ್ರಾಹಿಂ ಗಂಗೊಳ್ಳಿ ಅವರು ತನ್ನ ಸ್ನೇಹಿತರ ಜತೆಗೂಡಿ ತಮ್ಮ ಆಂಬ್ಯುಲೆನ್ಸ್‍ನಲ್ಲಿ ಯುವಕನನ್ನು ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಕೇಂದ್ರಕ್ಕೆ ದಾಖಲು ಮಾಡಿದ್ದರು.ನಾಲ್ಕು ತಿಂಗಳ ಆರೈಕೆ ಬಳಿಕ ಜಿಂಕು (ಸುನಿಲ್) ಸಂಪೂರ್ಣವಾಗಿ ಮಾನಸಿಕ ರೋಗದಿಂದ ಗುಣಮುಖಗೊಂಡು ಸಹಜ ಜೀವನಕ್ಕೆ ಮರಳಿದ್ದರು.ಮುಂಬೈ ಶೃದ್ಧಾ ಕೇಂದ್ರದ ಸಿಬ್ಬಂದಿಗಳ ಕಠಿಣ ಪರಿಶ್ರಮದಿಂದ ಆತನ ವಿಳಾಸವನ್ನು ಪತ್ತೆ ಹಚ್ಚಿ ಮೇ.13 ರಂದು ಹೆತ್ತವರ ಮಡಿಲಿಗೆ ಸೇರಿಸಲಾಗಿದೆ.
ಪ್ರೇಮ ವೈಪಲ್ಯವೆ ಮಾನಸಿಕತೆಗೆ ಕಾರಣ:ಉತ್ತರ ಪ್ರದೇಶ ಮೆಹದಾವಲ್ ಜಿಲ್ಲೆ ಬಡ ಕುಟುಂಬದ ನಿವಾಸಿ ಜಿಂಕು ತನ್ನ ಹುಟ್ಟೂರಲ್ಲಿ ಸೈಕಲ್ ಮ್ಯಾಕಾನಿಕ್ ಕೆಲಸವನ್ನು ಮಾಡಿಕೊಂಡಿದ್ದಾನು.ಪ್ರೇಮ ವೈಪಲ್ಯದಿಂದ ಮಾನಸಿಕಗೊಂಡ ಆತನು ಅಲ್ಲಿಂದ ನಾಪತ್ತೆಯಾಗಿದ್ದಾನೆ.ಎಷ್ಟೆ ಹುಡುಕಾಟ ನಡೆಸಿದ್ದರು ಮಗನು ಪತ್ತೆಯಾಗದೆ ಇರುವುದರಿಂದ ಹೆತ್ತವರು ಬಹಳಷ್ಟು ನೊಂದುಕೊಂಡಿದ್ದರು.ಸತತ ಎಂಟು ವರ್ಷದ ಬಳಿಕ ಜಿಂಕು ಮರಳಿ ತನ್ನ ಕುಟುಂಬಿಕರನ್ನು ಮತ್ತೆ ಸೇರಿಕೊಂಡಿರುವುದರಿಂದ ಹೆತ್ತವರ ಮೊಗದಲ್ಲಿ ಮಂದಹಾಸ ಮೂಡಿದೆ.ಒಂದು ಪ್ರೇಮ ಕಥೆ ಜಿಂಕವನ್ನು ಮಾನಸಿಕ ರೋಗಕ್ಕೆ ಬಲಿಯಾಗುವಂತೆ ಮಾಡಿರುವುದು ಮಾತ್ರವಲ್ಲದೆ ಎಂಟು ವರ್ಷಗಳಿಂದ ಊರೂರು ಸುತ್ತುವಂತೆ ಮಾಡಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago