ಕುಂದಾಪುರ

ಮೇಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಹಬ್ಬ

Share

ಕುಂದಾಪುರ:ಬೈಂದೂರು ತಾಲೂಕಿನ 11ನೇ ಉಳ್ಳೂರು ಮೂಡುಮರ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಕೋಡು ವಾರ್ಷಿಕ ಹಬ್ಬ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ವಿಜೃಂಭಣೆಯಿಂದ ನಡೆಯಿತು.
ಅಮ್ಮನವರ ವಾರ್ಷಿಕ ಹಬ್ಬದ ಪ್ರಯುಕ್ತ ಚಂಡಿಕಾಹೋಮ,ಕಲಶಾಭಿಷೇಕ,ಮಹಾಮಂಗಳಾರತಿ,ಪಂಚವಿಂಶತಿ ಕಲಶಸ್ಥಾಪನೆ,ಕಲಾತತ್ವಹೋಮ,ಅಧಿವಾಸಹೋಮ,ಗಣಪತಿ ಪ್ರಾರ್ಥನೆ,ಮಹಾ ಅನ್ನಸಂತರ್ಪಣೆ, ಹಾಗೂ ಪೆರ್ಡೂರು ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರಿಗೆ ಹರಕೆಯನ್ನು ಸಲ್ಲಿಸಿ ಅನ್ನಪ್ರಸಾದ ಸ್ವೀಕರಿಸಿದರು.
ಮೇಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ,ಸುಮಾರು 45 ವರ್ಷಗಳಿಂದ ದಾನಿಗಳು ಹಾಗೂ ಭಕ್ತರ ಸಹಕಾರದಿಂದ ವಾರ್ಷಿಕ ಹಬ್ಬವನ್ನು ಬಹಳ ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ.ದೇವಿಗೆ ಚಂಡಿಕಾ ಹೋಮ ಸಹಿತ ನಾನಾ ಧಾರ್ಮಿಕ ಪೂಜೆಗಳನ್ನು ನಡೆಸಲಾಗಿದೆ ಎಂದರು.ಗೋವುಗಳನ್ನು ದೇವರಿಗೆ ಅರ್ಪಿಸುವುದು ಇಲ್ಲಿನ ವಿಶೇಷವಾಗಿದ್ದು ಏಲಂ ಮುಖಾಂತರ ಹರಾಜು ಪ್ರಕ್ರಿಯೆ ಮಾಡಲಾಗುತ್ತದೆ.ಆರು ಗ್ರಾಮಕ್ಕೆ ಸಂಬಂಧಿಸಿದ ದೇವಸ್ಥಾನ ಇದ್ದಾಗಿದ್ದು ಬಹಳಷ್ಟು ಕಾರಣಿಕ ಸ್ಥಳವಾಗಿದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ನೂಜಾಡಿ ಪದ್ಮನಾಭ ಅಡಿಗ,ಉತ್ಸವ ಸಮಿತಿ ಹಾಗೂ ಆಡಳಿತ ಸಮಿತಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಉಳ್ಳೂರು ವೇದಮೂರ್ತಿ ವಾಸುದೇವ ಐತಾಳ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago