ಕುಂದಾಪುರ:ಬೈಂದೂರು ತಾಲೂಕಿನ 11ನೇ ಉಳ್ಳೂರು ಮೂಡುಮರ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಕೋಡು ವಾರ್ಷಿಕ ಹಬ್ಬ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ವಿಜೃಂಭಣೆಯಿಂದ ನಡೆಯಿತು.
ಅಮ್ಮನವರ ವಾರ್ಷಿಕ ಹಬ್ಬದ ಪ್ರಯುಕ್ತ ಚಂಡಿಕಾಹೋಮ,ಕಲಶಾಭಿಷೇಕ,ಮಹಾಮಂಗಳಾರತಿ,ಪಂಚವಿಂಶತಿ ಕಲಶಸ್ಥಾಪನೆ,ಕಲಾತತ್ವಹೋಮ,ಅಧಿವಾಸಹೋಮ,ಗಣಪತಿ ಪ್ರಾರ್ಥನೆ,ಮಹಾ ಅನ್ನಸಂತರ್ಪಣೆ, ಹಾಗೂ ಪೆರ್ಡೂರು ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರಿಗೆ ಹರಕೆಯನ್ನು ಸಲ್ಲಿಸಿ ಅನ್ನಪ್ರಸಾದ ಸ್ವೀಕರಿಸಿದರು.
ಮೇಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ,ಸುಮಾರು 45 ವರ್ಷಗಳಿಂದ ದಾನಿಗಳು ಹಾಗೂ ಭಕ್ತರ ಸಹಕಾರದಿಂದ ವಾರ್ಷಿಕ ಹಬ್ಬವನ್ನು ಬಹಳ ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ.ದೇವಿಗೆ ಚಂಡಿಕಾ ಹೋಮ ಸಹಿತ ನಾನಾ ಧಾರ್ಮಿಕ ಪೂಜೆಗಳನ್ನು ನಡೆಸಲಾಗಿದೆ ಎಂದರು.ಗೋವುಗಳನ್ನು ದೇವರಿಗೆ ಅರ್ಪಿಸುವುದು ಇಲ್ಲಿನ ವಿಶೇಷವಾಗಿದ್ದು ಏಲಂ ಮುಖಾಂತರ ಹರಾಜು ಪ್ರಕ್ರಿಯೆ ಮಾಡಲಾಗುತ್ತದೆ.ಆರು ಗ್ರಾಮಕ್ಕೆ ಸಂಬಂಧಿಸಿದ ದೇವಸ್ಥಾನ ಇದ್ದಾಗಿದ್ದು ಬಹಳಷ್ಟು ಕಾರಣಿಕ ಸ್ಥಳವಾಗಿದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ನೂಜಾಡಿ ಪದ್ಮನಾಭ ಅಡಿಗ,ಉತ್ಸವ ಸಮಿತಿ ಹಾಗೂ ಆಡಳಿತ ಸಮಿತಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಉಳ್ಳೂರು ವೇದಮೂರ್ತಿ ವಾಸುದೇವ ಐತಾಳ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…