ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಡಿಸೇಲ್ ಸೋರಿಕೆ ಭೀತಿ:ಗಂಗೊಳ್ಳಿ ಅಳಿವೆ ಸಮೀಪ 10 ಮಾರು ದೂರದಲ್ಲಿ ಮುಳುಗಿರುವ ಮಾಲ್ತೀ ದೇವಿ-2 ಬೋಟ್ನ ಟ್ಯಾಂಕ್ನಲ್ಲಿ 2,500 ಲೀಟರ್ ಡಿಸೇಲ್ ತುಂಬಿದೆ.ನೀರಿನ ಹೊಡೆತಕ್ಕೆ ಡಿಸೇಲ್ ಟ್ಯಾಂಕ್ ಒಡೆದರೆ ಸಮುದ್ರದಲ್ಲಿ ಡಿಸೇಲ್ ಸೋರಿಕೆ ಆಗುವ ಭೀತಿ ಎದುರಾಗಿದೆ.ಬೋಟ್ ರಕ್ಷಣಾ ಕಾರ್ಯಚರಣೆಯಲ್ಲಿ ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್ಹೌಸ್ ಗಂಗೊಳ್ಳಿ ಮತ್ತು ವೆಂಕಟೇಶ್ ಖಾರ್ವಿ,ಸಚಿನ್ ಖಾರ್ವಿ,ಶರತ್ ಖಾರ್ವಿ,ಗಂಗೊಳ್ಳಿ ಸಿಎಸ್ಪಿ ನಂಜಪ್ಪ ಎನ್.ಪಿ.ಐ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…