ಕುಂದಾಪುರ

ಮೀನುಗಾರಿಕಾ ಬೋಟ್ ಅವಘಡ,ಲಕ್ಷಾಂತರ.ರೂ ನಷ್ಟ

Share

ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಡಿಸೇಲ್ ಸೋರಿಕೆ ಭೀತಿ:ಗಂಗೊಳ್ಳಿ ಅಳಿವೆ ಸಮೀಪ 10 ಮಾರು ದೂರದಲ್ಲಿ ಮುಳುಗಿರುವ ಮಾಲ್ತೀ ದೇವಿ-2 ಬೋಟ್‍ನ ಟ್ಯಾಂಕ್‍ನಲ್ಲಿ 2,500 ಲೀಟರ್ ಡಿಸೇಲ್ ತುಂಬಿದೆ.ನೀರಿನ ಹೊಡೆತಕ್ಕೆ ಡಿಸೇಲ್ ಟ್ಯಾಂಕ್ ಒಡೆದರೆ ಸಮುದ್ರದಲ್ಲಿ ಡಿಸೇಲ್ ಸೋರಿಕೆ ಆಗುವ ಭೀತಿ ಎದುರಾಗಿದೆ.ಬೋಟ್ ರಕ್ಷಣಾ ಕಾರ್ಯಚರಣೆಯಲ್ಲಿ ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ಮತ್ತು ವೆಂಕಟೇಶ್ ಖಾರ್ವಿ,ಸಚಿನ್ ಖಾರ್ವಿ,ಶರತ್ ಖಾರ್ವಿ,ಗಂಗೊಳ್ಳಿ ಸಿಎಸ್‍ಪಿ ನಂಜಪ್ಪ ಎನ್.ಪಿ.ಐ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago