ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ದಾರುಣ ಸಾವು

Share

Advertisement
Advertisement
Advertisement

ಕುಂದಾಪುರ:ಮನೆಯ ಗೇಟ್ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ಭಾನುವಾರ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.
ಶನಿವಾರ ತಡರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದಿದ್ದಾರೆ,ಈ ವೇಳೆ ವಿದ್ಯುತ್ ತಂತಿ ಯಿಂದ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಈ ಸಂಬಂಧ
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಇರ್ಷಾದ್ ಮೀನುಗಾರರಾಗಿದ್ದು, ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಶನಿವಾರವಷ್ಟೇ ಮನೆಗೆ ಬಂದಿದ್ದರು.ಪತ್ನಿ,ಇಬ್ಬರು ಪುತ್ರರು,ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಇರ್ಷಾದ್ ಅವರ ಅಗಲುವಿಕೆಯಿಂದ ಬಡ ಕುಟುಂಬ ಕಂಗಾಲಾಗಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page