ಕುಂದಾಪುರ

ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಯುನೆಟೈಡ್ ಟೊಯೋಟ ಕಂಪೆನಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಎನ್ನುವ ವಿನೂತ ಕಾರ್ಯಕ್ರಮವನ್ನು ಬಸ್ರೂರು ಜಂಕ್ಷನ್‍ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.
ಊರಾಗ್ ಒಂದ ಕಾರ್ ಹಬ್ಬದ ಪ್ರಯುಕ್ತ ಟೊಯೋಟ ಕಂಪೆನಿಯ ವಿವಿಧ ಬಗೆಯ ಕಾರ್‍ಗಳನ್ನು ಪ್ರದರ್ಶನಕ್ಕೆ ಇಡಲಾಯಿತು.ದುಬಾರಿ ಬೆಲೆಯ ಕಾರ್‍ಗಳನ್ನು ನೋಡಿ ಜನರು ಖುಷಿಪಟ್ಟರು.ಗ್ರಾಹಕರು ಕಾರ್ ಹಬ್ಬದಲ್ಲಿ ಭಾಗವಹಿಸಿ ಟೊಯೋಟ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡು.ಹೊಸ ಕಾರ್ ಖರೀದಿಗೆ ಬುಕ್ಕಿಂಗ್ ಕೂಡ ಮಾಡಿದರು.ಗ್ರಾಹಕರಿಗೆ ಟೆಸ್ಟ್ ಡ್ರೈ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ಮಾಡಲಾಯಿತು.
ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅವರು ದೀಪ ಬೆಳಗಿಸುವುದರ ಮೂಲಕ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಅಷ್ಟೇನು ಅನುಕೂಲತೆಗಳು ಇಲ್ಲದಂತಹ ಆಗಿನ ಕಾಲದಲ್ಲಿ ಕುಂದಾಪುರ ತಾಲೂಕಿನಲ್ಲಿ ಬರೆ ಎರಡು ಕಾರುಗಳು ಮಾತ್ರ ಓಡಾಟ ಮಾಡುತ್ತಿದ್ದವು.ಬಹಳಷ್ಟು ವೇಗವಾಗಿ ಬೆಳೆಯುತ್ತಿರುವ ಕುಂದಾಪುರ ತಾಲೂಕಿನಲ್ಲಿ ಇಂದು ಬದಲಾವಣೆಯ ಪರ್ವವನ್ನು ನೋಡಬಹುದಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಕಾರ್ ಮೇಳವನ್ನು ಆಯೋಜನೆ ಮಾಡಿರುವುದರಿಂದ ಹಳ್ಳಿ ಜನರು ಕೂಡ ತಮ್ಮ ಊರಿನಲ್ಲೆ ಉತ್ತಮ ದರ್ಜೆ ಕಾರ್‍ಗಳನ್ನು ನೋಡಿ ಕೊಂಡು ಕೊಳ್ಳಲು ಅವಕಾಶವನ್ನು ಕಲ್ಪಿಸಿದಂತೆ ಆಗಿದೆ ಎಂದರು.
ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ ಮಾತನಾಡಿ,ಕಾರ್‍ಗಳನ್ನು ಕೊಂಡು ಕೊಳ್ಳಬೇಕಾಗಿದ್ದರೆ ಈ ಹಿಂದೆ ನಗರ ಪ್ರದೇಶಗಳಿಗೆ ಹೊಗಬೇಕಾಗಿತ್ತು.ಕುಂದಾಪುರದಂತಹ ಪ್ರದೇಶದಲ್ಲಿ ತಮ್ಮ ಕಂಪೆನಿ ಶೋರೂಂ ಅನ್ನು ಆರಂಭಿಸುವುದರ ಮೂಲಕ ತಮ್ಮ ಊರಿನಲ್ಲೆ ಆಕರ್ಷಕ ಕಾರ್‍ಗಳನ್ನು ನೋಡಿ ಕೊಂಡು ಕೊಳ್ಳಲು ಜನರಿಗೆ ಟೊಯೋಟ ಕಂಪೆನಿ ಅವಕಾಶವನ್ನು ಮಾಡಿಕೊಟ್ಟಿದೆ ಎಂದರು.
ಯೂಟ್ರಸ್ಟ್ ಮ್ಯಾನೇಜರ್ ಪ್ರತಾಪ ಅವರು ಕಾರ್ ಮೇಳವನ್ನು ಕುರಿತು ಮಾತನಾಡಿ,ಯುನೈಟೆಡ್ ಕಂಪೆನಿ ವತಿಯಿಂದ ಊರಾಗ್ ಒಂದ ಕಾರ ಹಬ್ಬವನ್ನು ಬಸ್ರೂರುನಲ್ಲಿ ಆಯೋಜನೆ ಮಾಡಲಾಗಿದೆ.ಇವೊಂದು ಕಾರ್ ಹಬ್ಬ ಮೇ.26 ರ ತನಕ ನಡೆಯಲಿದೆ ಎಂದು ಹೇಳಿದರು.ಜನರ ಪ್ರತಿಕ್ರಿಯೆ ಉತ್ತಮ ರೀತಿಯಲ್ಲಿ ವ್ಯಕ್ತವಾಗುತ್ತಿದೆ ಎಂದರು.ಒನ್ ಸ್ಪಾಟ್‍ನಲ್ಲಿ ಹಳೆ ಕಾರನ್ನು ಉತ್ತಮ ಬೆಲೆಗೆ ಖರೀದಿಸಿ ಹೊಸಕಾರಿಗೆ ಲೊನ್ ವ್ಯವಸ್ಥೆ ಕೂಡ ಸ್ಥಳದಲ್ಲೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದೇವೆ ಜನರು ಕಾರ್ ಹಬ್ಬ ಪ್ರಯೋಜನ ಪಡೆದುಕೊಳ್ಳಬೇಕೆಂದರು.ಗ್ಲಾಂಝಾ ಮತ್ತು ಹೈರೆಡರ್ ಕಾರ್ ಮೇಲೆ ಒಂದು ಲಕ್ಷ ಹಾಗೂ ಪಾರ್ಚೂನರ್ ಕಾರ್ ಮೇಲೆ 3 ಲಕ್ಷ ಡಿಸ್ಕೌಂಟ್ ಆಫರ್ ಇಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುನೈಟೆಡ್ ಟೊಯೋಟ ಕುಂದಾಪುರ ಜಾಲಾಡಿ ಬ್ರಾಂಚ್ ಮ್ಯಾನೇಜರ್ ರವೀಂದ್ರ,ಮಾರ್ಕೆಂಟಿಗ್ ಗ್ರೂಪ್ ಮ್ಯಾನೇಜರ್ ಸೋನಿಯ,ಕುಂದಾಪುರ ಟೀಮ್ ಲೀಡರ್ ಆದರ್ಶ ಮತ್ತು ಸಿಬ್ಬಂದಿಗಳು ಉಪಸ್ಥಿತಿದ್ದರು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 hours ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago